<p>ಯಾದವಾಡ: ಗ್ರಾಮದ ಮಾಳಿಂಗೇಶ್ವರ ಸಿದ್ದಗಿರಿ ಸಿದ್ದಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳು 10ರಿಂದ 16 ವರ್ಷದ ಮಕ್ಕಳಿಗಾಗಿ ಏರ್ಪಡಿಸಿದ ಐದು ದಿನಗಳ ಸಂಸ್ಕಾರ ಶಿಬಿರ ಈಚೆಗೆ, ಶಾರದಾ ಮಾತೆಯ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಆರಂಭಿಸಿದರು.</p>.<p>ಸಂಸ್ಕಾರ ಶಿಬಿರವು ಪ್ರತಿದಿನ ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ನಡೆಯಿತು. ಸಂಸ್ಕ್ರತ ಸಂಭಾಷಣೆ, ಭಗವದ್ಗೀತೆ, ಸಂಸ್ಕ್ರತ ಶ್ಲೋಕಗಳು, ನೀತಿಯ ಕಥೆಗಳು, ನಿತ್ಯ ದೇವರ ಪೂಜಾ ಪಾಠವನ್ನು ಒಳಗೊಂಡಿದೆ.</p>.<p>ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಮೌಲ್ಯಗಳು, ಶಿಸ್ತು ಮತ್ತು ಆಧ್ಯಾತ್ಮಿಕ ಜ್ಞಾನವನ್ನು ಬೆಳೆಸುವುದರ ಜೊತೆಗೆ ಯೋಗ, ಭಜನೆ, ಕಥೆ ಹೇಳುವಿಕೆ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳನ್ನು ಒಳಗೊಂಡಿದೆ. ಸಿದ್ಧಾರೂಡ ಕಂಬಾರ ಗುರೂಜಿ, ರಮಾನಂದ ಭಾರತಿ ಸ್ವಾಮೀಜಿ, ಗೀತಮ್ಮ ತಾಯಿ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ.</p>.<p>ಯಾದವಾಡ ಹಾಗೂ ಸುತ್ತಮುತ್ತಲಿನ ಗ್ರಾಮದ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿದ್ದಾರೆ ಎಂದು ಆಯೋಜಕ ಮಾಳಿಂಗೇಶ್ವರ ಆಶ್ರಮದ ಸಿದ್ದೇಶ್ವರ ಸ್ವಾಮಿಜಿ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-21-159749781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದವಾಡ: ಗ್ರಾಮದ ಮಾಳಿಂಗೇಶ್ವರ ಸಿದ್ದಗಿರಿ ಸಿದ್ದಾಶ್ರಮದಲ್ಲಿ ಸಿದ್ದೇಶ್ವರ ಶ್ರೀಗಳು 10ರಿಂದ 16 ವರ್ಷದ ಮಕ್ಕಳಿಗಾಗಿ ಏರ್ಪಡಿಸಿದ ಐದು ದಿನಗಳ ಸಂಸ್ಕಾರ ಶಿಬಿರ ಈಚೆಗೆ, ಶಾರದಾ ಮಾತೆಯ ವಿಗ್ರಹಕ್ಕೆ ಪೂಜೆ ಸಲ್ಲಿಸಿ ಆರಂಭಿಸಿದರು.</p>.<p>ಸಂಸ್ಕಾರ ಶಿಬಿರವು ಪ್ರತಿದಿನ ಬೆಳಿಗ್ಗೆ 7ರಿಂದ 10 ಗಂಟೆಯವರೆಗೆ ನಡೆಯಿತು. ಸಂಸ್ಕ್ರತ ಸಂಭಾಷಣೆ, ಭಗವದ್ಗೀತೆ, ಸಂಸ್ಕ್ರತ ಶ್ಲೋಕಗಳು, ನೀತಿಯ ಕಥೆಗಳು, ನಿತ್ಯ ದೇವರ ಪೂಜಾ ಪಾಠವನ್ನು ಒಳಗೊಂಡಿದೆ.</p>.<p>ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಮೌಲ್ಯಗಳು, ಶಿಸ್ತು ಮತ್ತು ಆಧ್ಯಾತ್ಮಿಕ ಜ್ಞಾನವನ್ನು ಬೆಳೆಸುವುದರ ಜೊತೆಗೆ ಯೋಗ, ಭಜನೆ, ಕಥೆ ಹೇಳುವಿಕೆ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳನ್ನು ಒಳಗೊಂಡಿದೆ. ಸಿದ್ಧಾರೂಡ ಕಂಬಾರ ಗುರೂಜಿ, ರಮಾನಂದ ಭಾರತಿ ಸ್ವಾಮೀಜಿ, ಗೀತಮ್ಮ ತಾಯಿ ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ.</p>.<p>ಯಾದವಾಡ ಹಾಗೂ ಸುತ್ತಮುತ್ತಲಿನ ಗ್ರಾಮದ 250 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿದ್ದಾರೆ ಎಂದು ಆಯೋಜಕ ಮಾಳಿಂಗೇಶ್ವರ ಆಶ್ರಮದ ಸಿದ್ದೇಶ್ವರ ಸ್ವಾಮಿಜಿ ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260517-21-159749781</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>