<p>ಯಳಂದೂರು: ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿ ಅಸ್ತಿತ್ವದಲ್ಲಿದ್ದ ಮೂಢನಂಬಿಕೆ ಮತ್ತು ಸ್ತ್ರೀ ಅಸಮಾನತೆಗಳನ್ನು ಸರಳ ಭಾಷೆಯಲ್ಲಿ ಖಂಡಿಸಿದ ದೇವರ ದಾಸಿಮಯ್ಯ ನಿಜ ಶರಣ ಎಂದು ರಾಜಸ್ವ ನಿರೀಕ್ಷಕ ಎಂ.ಎಸ್.ಯದುಗಿರಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>‘ ಜಾತಿ ಮತಕ್ಕೆ ಕಟ್ಟು ಬೀಳದೆ, ಸಮಾಜದ ಒಳಿತಿಗೆ ಚಿಂತಿಸಿದ ದಾರ್ಶನಿಕ ದಾಸಿಮಯ್ಯ ರಚಿಸಿದ ವಚನಗಳು ಕನ್ನಡ ಸಾರಸ್ವತ ಲೋಕದಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುತ್ತವೆ ’ ಎಂದರು.</p>.<p>ಸರಳ ಭಾಷೆಯಲ್ಲಿ ವಚನಗಳ ಸಾರವನ್ನು ಸಾಮಾನ್ಯ ಜನರಿಗೂ ತಿಳಿಯುವಂತೆ ರಚಿಸಿ ಹಾಡಿದರು. ಕಾಯಕದಿಂದ ಜೀವನ ಸಾಗಿಸಬೇಕು ಎಂದು ತಿಳಿಸಿದರು.</p>.<p>ಜೇಡರ ದಾಸಿಮಯ್ಯ ತಾಲ್ಲೂಕು ಅಧ್ಯಕ್ಷ ಬಸವರಾಜು, ಶಿರಸ್ತೇದಾರ್ ಶಾಂತಿ, ರೂಪಶ್ರೀ ಎಡಿಆರ್ಎಲ್ ಉಮೇಶ್ ಹಾಗೂ ಸಂಘದ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-37-1751393238</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಳಂದೂರು: ಹನ್ನೆರಡನೇ ಶತಮಾನದಲ್ಲಿ ಸಮಾಜದಲ್ಲಿ ಅಸ್ತಿತ್ವದಲ್ಲಿದ್ದ ಮೂಢನಂಬಿಕೆ ಮತ್ತು ಸ್ತ್ರೀ ಅಸಮಾನತೆಗಳನ್ನು ಸರಳ ಭಾಷೆಯಲ್ಲಿ ಖಂಡಿಸಿದ ದೇವರ ದಾಸಿಮಯ್ಯ ನಿಜ ಶರಣ ಎಂದು ರಾಜಸ್ವ ನಿರೀಕ್ಷಕ ಎಂ.ಎಸ್.ಯದುಗಿರಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ದೇವರ ದಾಸಿಮಯ್ಯ ಜಯಂತಿಯಲ್ಲಿ ಅವರು ಮಾತನಾಡಿದರು.</p>.<p>‘ ಜಾತಿ ಮತಕ್ಕೆ ಕಟ್ಟು ಬೀಳದೆ, ಸಮಾಜದ ಒಳಿತಿಗೆ ಚಿಂತಿಸಿದ ದಾರ್ಶನಿಕ ದಾಸಿಮಯ್ಯ ರಚಿಸಿದ ವಚನಗಳು ಕನ್ನಡ ಸಾರಸ್ವತ ಲೋಕದಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುತ್ತವೆ ’ ಎಂದರು.</p>.<p>ಸರಳ ಭಾಷೆಯಲ್ಲಿ ವಚನಗಳ ಸಾರವನ್ನು ಸಾಮಾನ್ಯ ಜನರಿಗೂ ತಿಳಿಯುವಂತೆ ರಚಿಸಿ ಹಾಡಿದರು. ಕಾಯಕದಿಂದ ಜೀವನ ಸಾಗಿಸಬೇಕು ಎಂದು ತಿಳಿಸಿದರು.</p>.<p>ಜೇಡರ ದಾಸಿಮಯ್ಯ ತಾಲ್ಲೂಕು ಅಧ್ಯಕ್ಷ ಬಸವರಾಜು, ಶಿರಸ್ತೇದಾರ್ ಶಾಂತಿ, ರೂಪಶ್ರೀ ಎಡಿಆರ್ಎಲ್ ಉಮೇಶ್ ಹಾಗೂ ಸಂಘದ ಸದಸ್ಯರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-37-1751393238</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>