<p>ಯಲ್ಲಾಪುರ: ‘ವೈದಿಕ ಪರಂಪರೆಗೆ ಬಹುದೊಡ್ಡ ಇತಿಹಾಸವಿದೆ. ವೇದ, ಉಪನಿಷತ್ತು, ಜ್ಯೋತಿಷ್ಯ, ಸಂಸ್ಕೃತ ಅಧ್ಯಯನ ಮಾಡಿದವರು ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗುತ್ತಾರೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಪಟ್ಟಣದ ನಾಯಕನ ಕೆರೆಯ ಶಾರದಾಂಬಾ ಸಂಸ್ಕೃತ ಪಾಠಶಾಲೆಯಲ್ಲಿ ಮಂಗಳವಾರ ನಡೆದ ವಸಂತ ವೇದ ಸಂಸ್ಕೃತ ಯೋಗ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ವಾನ್ ವೆಂಕಟ್ರಮಣ ಭಟ್ಟ ಹಲಸ್ಖಂಡ ಮಾತನಾಡಿ, ‘ಸನಾತನ ಸಂಸ್ಕೃತಿ ಬದುಕಿಗೆ ಸನ್ಮಾರ್ಗ ತೋರಿಸುತ್ತದೆ. ಧರ್ಮ ನಮಗೆ ಹೇಗೆ ಸಾಗಬೇಕೆನ್ನುವುದನ್ನು ತಿಳಿಸುತ್ತದೆ. ಧರ್ಮ, ಅರ್ಥ, ಕಾಮ, ಮೋಕ್ಷ ಮನುಷ್ಯನನ್ನು ಶ್ರೇಷ್ಠತೆಯೆಡೆಗೆ ಕೊಂಡೊಯ್ಯುತ್ತವೆ’ ಎಂದರು.</p>.<p>ಶಾರದಾಂಬಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಉಮೇಶ ಭಾಗ್ವತ ಅಧ್ಯಕ್ಷತೆ ವಹಿಸಿದ್ದರು. ಶಾರದಾಂಬಾ ದೇವಸ್ಥಾನದ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ತಾಲ್ಲೂಕು ಹವ್ಯಕ ಸಂಘದ ಅಧ್ಯಕ್ಷ ಡಿ.ಶಂಕರ ಭಟ್ಟ, ಯಲ್ಲಾಪುರ ಸೀಮಾ ಅಧ್ಯಕ್ಷ ಎನ್.ಎಂ ಹೆಗಡೆ ಪಣತಗೇರಿ ಮಾತನಾಡಿದರು.</p>.<p>ಶಾರದಾಂಬಾ ದೇವಸ್ಥಾನದ ಕಾರ್ಯಾಧ್ಯಕ್ಷ ಜಗದೀಶ ದೀಕ್ಷಿತ, ಸಹ ಕಾರ್ಯದರ್ಶಿ ನರಸಿಂಹ ಗೇರಗದ್ದೆ, ನಿರ್ದೇಶಕರಾದ ಶಂಕರ ಭಟ್ಟ ತಾರೀಮಕ್ಕಿ, ನಾಗೇಂದ್ರ ಕವಾಳೆ ಇದ್ದರು. ಪ್ರಾಧ್ಯಾಪಕ ಶಿವರಾಮ ಭಾಗ್ವತ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ತಿಕೇಯ ಭಟ್ಟ ನಿರೂಪಿಸಿದರು. ಅಧ್ಯಾಪಕ ನರಸಿಂಹ ಭಟ್ಟ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-20-1387624194</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲ್ಲಾಪುರ: ‘ವೈದಿಕ ಪರಂಪರೆಗೆ ಬಹುದೊಡ್ಡ ಇತಿಹಾಸವಿದೆ. ವೇದ, ಉಪನಿಷತ್ತು, ಜ್ಯೋತಿಷ್ಯ, ಸಂಸ್ಕೃತ ಅಧ್ಯಯನ ಮಾಡಿದವರು ಸಮಾಜದಲ್ಲಿ ಗೌರವಕ್ಕೆ ಪಾತ್ರರಾಗುತ್ತಾರೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.</p>.<p>ಪಟ್ಟಣದ ನಾಯಕನ ಕೆರೆಯ ಶಾರದಾಂಬಾ ಸಂಸ್ಕೃತ ಪಾಠಶಾಲೆಯಲ್ಲಿ ಮಂಗಳವಾರ ನಡೆದ ವಸಂತ ವೇದ ಸಂಸ್ಕೃತ ಯೋಗ ಶಿಬಿರ ಉದ್ಘಾಟಿಸಿ ಮಾತನಾಡಿದರು.</p>.<p>ವಿದ್ವಾನ್ ವೆಂಕಟ್ರಮಣ ಭಟ್ಟ ಹಲಸ್ಖಂಡ ಮಾತನಾಡಿ, ‘ಸನಾತನ ಸಂಸ್ಕೃತಿ ಬದುಕಿಗೆ ಸನ್ಮಾರ್ಗ ತೋರಿಸುತ್ತದೆ. ಧರ್ಮ ನಮಗೆ ಹೇಗೆ ಸಾಗಬೇಕೆನ್ನುವುದನ್ನು ತಿಳಿಸುತ್ತದೆ. ಧರ್ಮ, ಅರ್ಥ, ಕಾಮ, ಮೋಕ್ಷ ಮನುಷ್ಯನನ್ನು ಶ್ರೇಷ್ಠತೆಯೆಡೆಗೆ ಕೊಂಡೊಯ್ಯುತ್ತವೆ’ ಎಂದರು.</p>.<p>ಶಾರದಾಂಬಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಉಮೇಶ ಭಾಗ್ವತ ಅಧ್ಯಕ್ಷತೆ ವಹಿಸಿದ್ದರು. ಶಾರದಾಂಬಾ ದೇವಸ್ಥಾನದ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ತಾಲ್ಲೂಕು ಹವ್ಯಕ ಸಂಘದ ಅಧ್ಯಕ್ಷ ಡಿ.ಶಂಕರ ಭಟ್ಟ, ಯಲ್ಲಾಪುರ ಸೀಮಾ ಅಧ್ಯಕ್ಷ ಎನ್.ಎಂ ಹೆಗಡೆ ಪಣತಗೇರಿ ಮಾತನಾಡಿದರು.</p>.<p>ಶಾರದಾಂಬಾ ದೇವಸ್ಥಾನದ ಕಾರ್ಯಾಧ್ಯಕ್ಷ ಜಗದೀಶ ದೀಕ್ಷಿತ, ಸಹ ಕಾರ್ಯದರ್ಶಿ ನರಸಿಂಹ ಗೇರಗದ್ದೆ, ನಿರ್ದೇಶಕರಾದ ಶಂಕರ ಭಟ್ಟ ತಾರೀಮಕ್ಕಿ, ನಾಗೇಂದ್ರ ಕವಾಳೆ ಇದ್ದರು. ಪ್ರಾಧ್ಯಾಪಕ ಶಿವರಾಮ ಭಾಗ್ವತ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ತಿಕೇಯ ಭಟ್ಟ ನಿರೂಪಿಸಿದರು. ಅಧ್ಯಾಪಕ ನರಸಿಂಹ ಭಟ್ಟ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-20-1387624194</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>