<p>ವಡಗೇರಾ: ‘ದೇವರ ಹೆಸರಿನಲ್ಲಿ ಪ್ರಾಣಿ ಬಲಿ ಕೊಡುವಂತ ಮೌಢ್ಯಗಳಿಂದ ದೂರವಿದ್ದು, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡುವ ಕೆಲಸವನ್ನು ಪಾಲಕರು ಮಾಡಬೇಕು’ ಎಂದು ಅಖಿಲ ಭಾರತೀಯ ಕೋಲಿ ಸಮಾಜ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ ಮುದ್ನಾಳ ಹೇಳಿದರು.</p>.<p>ತಾಲ್ಲೂಕಿನ ಮಾಚನೂರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನಿಜಶರಣ ಅಂಬಿಗರ ಚೌಡಯ್ಯನವರ ಗದ್ದುಗೆ ಮತ್ತು ಗೋಪುರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾತನಾಡಿದರು.</p>.<p>ಸಮಾಜದ ಅಭಿವೃದ್ಧಿಗಾಗಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದ್ದು, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಪೋಷಕರು ಮುಂದಾಗಬೇಕು ಇದರಿಂದ ಮಕ್ಕಳ ಭವಿಷ್ಯದ ಜತೆಗೆ ಸಮಾಜದ ಅಭಿವೃದ್ಧಿಯೂ ಆಗುತ್ತದೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ವಿರುಪಾಕ್ಷಗೌಡ, ಭೀಮಾಶಂಕರ, ಮಲ್ಲಪ್ಪ, ಜಗದೀಶ, ಮಾನಪ್ಪ, ರವಿ, ಭಾಗಣ್ಣ, ಹಣಮಂತ, ಪವನ, ಭೀಮರಾಯ, ಸಿದ್ದಪ್ಪ, ಬಸಪ್ಪ, ಬನ್ನಪ್ಪ, ಭೀಮರಡ್ಡಿ, ಮಲ್ಲಪ್ಪ, ಶಿವಪ್ಪ, ಬೆನಕಪ್ಪ, ಮೋನಪ್ಪ, ಭೀಮಪ್ಪ, ಬಸಪ್ಪ, ಸಿದ್ದಪ್ಪ, ಸಾಬರೆಡ್ಡಿ, ಮಲ್ಲಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-30-455763369</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಡಗೇರಾ: ‘ದೇವರ ಹೆಸರಿನಲ್ಲಿ ಪ್ರಾಣಿ ಬಲಿ ಕೊಡುವಂತ ಮೌಢ್ಯಗಳಿಂದ ದೂರವಿದ್ದು, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡುವ ಕೆಲಸವನ್ನು ಪಾಲಕರು ಮಾಡಬೇಕು’ ಎಂದು ಅಖಿಲ ಭಾರತೀಯ ಕೋಲಿ ಸಮಾಜ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ ಮುದ್ನಾಳ ಹೇಳಿದರು.</p>.<p>ತಾಲ್ಲೂಕಿನ ಮಾಚನೂರ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ನಿಜಶರಣ ಅಂಬಿಗರ ಚೌಡಯ್ಯನವರ ಗದ್ದುಗೆ ಮತ್ತು ಗೋಪುರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾತನಾಡಿದರು.</p>.<p>ಸಮಾಜದ ಅಭಿವೃದ್ಧಿಗಾಗಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದ್ದು, ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಪೋಷಕರು ಮುಂದಾಗಬೇಕು ಇದರಿಂದ ಮಕ್ಕಳ ಭವಿಷ್ಯದ ಜತೆಗೆ ಸಮಾಜದ ಅಭಿವೃದ್ಧಿಯೂ ಆಗುತ್ತದೆ ಎಂದು ಹೇಳಿದರು.</p>.<p>ಈ ಸಂದರ್ಭದಲ್ಲಿ ವಿರುಪಾಕ್ಷಗೌಡ, ಭೀಮಾಶಂಕರ, ಮಲ್ಲಪ್ಪ, ಜಗದೀಶ, ಮಾನಪ್ಪ, ರವಿ, ಭಾಗಣ್ಣ, ಹಣಮಂತ, ಪವನ, ಭೀಮರಾಯ, ಸಿದ್ದಪ್ಪ, ಬಸಪ್ಪ, ಬನ್ನಪ್ಪ, ಭೀಮರಡ್ಡಿ, ಮಲ್ಲಪ್ಪ, ಶಿವಪ್ಪ, ಬೆನಕಪ್ಪ, ಮೋನಪ್ಪ, ಭೀಮಪ್ಪ, ಬಸಪ್ಪ, ಸಿದ್ದಪ್ಪ, ಸಾಬರೆಡ್ಡಿ, ಮಲ್ಲಪ್ಪ ಸೇರಿದಂತೆ ಇನ್ನಿತರರು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-30-455763369</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>