<p><strong>ಬೆಂಗಳೂರು:</strong> ಲಿಂಗೈಕ್ಯ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ 'ಭಾರತ ರತ್ನ' ನೀಡುವಂತೆ ಆಗ್ರಹಿಸಿ ಪುರಭವನದ ಮುಂಭಾಗ ‘ರಾಷ್ಟ್ರೀಯ ಬಸವಧರ್ಮ ಪೀಠ’ದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಜಾತಿ, ಮತ, ಧರ್ಮ, ಪಂಗಡ ಎಂಬುದನ್ನು ಭೇದಭಾವ ತೋರಿಸದೆ ಸ್ವಾಮೀಜಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಎಲ್ಲರನ್ನೂ ಭಕ್ತರೆಂದು ಪರಿಗಣಿಸಿ ನಿತ್ಯ ಅಕ್ಷರ, ಅನ್ನ ದಾಸೋಹ ಮಾಡುತ್ತಿದ್ದ ಶ್ರೀಗಳಿಗೆ ಭಾರತರತ್ನ ನೀಡದೆಕೇಂದ್ರ ಸರ್ಕಾರವು ಅನ್ಯಾಯ ಮಾಡಿದೆ’ ಎಂದು ದೂರಿದರು.</p>.<p>‘ಶ್ರೀಗಳಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಕೊಡುವಂತೆ ಪ್ರಧಾನಿ ಮೋದಿ ಅವರ ಮೇಲೆ ಎಲ್ಲ ಪಕ್ಷಗಳ ಮುಖಂಡರು ಒತ್ತಡ ಹಾಕಬೇಕು’ ಎಂದುಪೀಠದ ಪ್ರಧಾನ ಕಾರ್ಯದರ್ಶಿ ಬಸವಕುಮಾರ ಸ್ವಾಮೀಜಿ ಮನವಿ ಮಾಡಿದರು.</p>.<p>ಶ್ರೀಗಳ ಪುಣ್ಯತಿಥಿ ಜ.31ರಂದು ಜರುಗಲಿದೆ. ಅಂದು ಕೇಶ ಮುಂಡನೆ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ. ಇದು ದುಃಖಕರ ಸಂಗತಿ. ಅದೊಂದು ವೈದಿಕ ಧಾರ್ಮಿಕ ಸಂಪ್ರದಾಯ ಪದ್ಧತಿ. ಅದನ್ನು ಅನುಸರಿಸಬಾರದು. ಸಿದ್ಧಲಿಂಗ ಸ್ವಾಮಿ ಅವರು ಈ ಕಾರ್ಯಕ್ಕೆ ತಡೆ ಹಾಕಬೇಕು. ಅದರ ಬದಲಿಗೆ ಶ್ರೀಗಳ ಹೆಸರಿನಲ್ಲಿ ಪ್ರವಚನ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಉತ್ತಮ ಎಂದು ಸಲಹೆ ನೀಡಿದರು.</p>.<p>‘ಲೋಕಸಭೆ ಚುನಾವಣೆಯೊಳಗೆ ಲಿಂಗಾಯತ ಧರ್ಮಕ್ಕೆ ಮಾನ್ಯತೆ ದೊರಕಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲಿಂಗೈಕ್ಯ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ 'ಭಾರತ ರತ್ನ' ನೀಡುವಂತೆ ಆಗ್ರಹಿಸಿ ಪುರಭವನದ ಮುಂಭಾಗ ‘ರಾಷ್ಟ್ರೀಯ ಬಸವಧರ್ಮ ಪೀಠ’ದ ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>‘ಜಾತಿ, ಮತ, ಧರ್ಮ, ಪಂಗಡ ಎಂಬುದನ್ನು ಭೇದಭಾವ ತೋರಿಸದೆ ಸ್ವಾಮೀಜಿ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ. ಎಲ್ಲರನ್ನೂ ಭಕ್ತರೆಂದು ಪರಿಗಣಿಸಿ ನಿತ್ಯ ಅಕ್ಷರ, ಅನ್ನ ದಾಸೋಹ ಮಾಡುತ್ತಿದ್ದ ಶ್ರೀಗಳಿಗೆ ಭಾರತರತ್ನ ನೀಡದೆಕೇಂದ್ರ ಸರ್ಕಾರವು ಅನ್ಯಾಯ ಮಾಡಿದೆ’ ಎಂದು ದೂರಿದರು.</p>.<p>‘ಶ್ರೀಗಳಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಕೊಡುವಂತೆ ಪ್ರಧಾನಿ ಮೋದಿ ಅವರ ಮೇಲೆ ಎಲ್ಲ ಪಕ್ಷಗಳ ಮುಖಂಡರು ಒತ್ತಡ ಹಾಕಬೇಕು’ ಎಂದುಪೀಠದ ಪ್ರಧಾನ ಕಾರ್ಯದರ್ಶಿ ಬಸವಕುಮಾರ ಸ್ವಾಮೀಜಿ ಮನವಿ ಮಾಡಿದರು.</p>.<p>ಶ್ರೀಗಳ ಪುಣ್ಯತಿಥಿ ಜ.31ರಂದು ಜರುಗಲಿದೆ. ಅಂದು ಕೇಶ ಮುಂಡನೆ ನಡೆಯಲಿದೆ ಎಂಬುದಾಗಿ ತಿಳಿಸಿದ್ದಾರೆ. ಇದು ದುಃಖಕರ ಸಂಗತಿ. ಅದೊಂದು ವೈದಿಕ ಧಾರ್ಮಿಕ ಸಂಪ್ರದಾಯ ಪದ್ಧತಿ. ಅದನ್ನು ಅನುಸರಿಸಬಾರದು. ಸಿದ್ಧಲಿಂಗ ಸ್ವಾಮಿ ಅವರು ಈ ಕಾರ್ಯಕ್ಕೆ ತಡೆ ಹಾಕಬೇಕು. ಅದರ ಬದಲಿಗೆ ಶ್ರೀಗಳ ಹೆಸರಿನಲ್ಲಿ ಪ್ರವಚನ ಸೇರಿದಂತೆ ಇತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡರೆ ಉತ್ತಮ ಎಂದು ಸಲಹೆ ನೀಡಿದರು.</p>.<p>‘ಲೋಕಸಭೆ ಚುನಾವಣೆಯೊಳಗೆ ಲಿಂಗಾಯತ ಧರ್ಮಕ್ಕೆ ಮಾನ್ಯತೆ ದೊರಕಿಸಿಕೊಡಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>