2017ರಲ್ಲಿ ರಾಜ್ಯಪಾಲರಾಗಿದ್ದ ಬನ್ವರಿಲಾಲ್ ಪುರೋಹಿತ್ ಅವರು ತಮ್ಮ ಜಿಲ್ಲಾ ಪ್ರವಾಸದ ವೇಳೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಆಗ, ರಾಜ್ಯಪಾಲರ ನಡೆಯನ್ನು ಟೀಕಿಸಿದ್ದ ಡಿಎಂಕೆ, ಅದನ್ನು ‘ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ಸ್ಪಷ್ಟ ಹಸ್ತಕ್ಷೇಪ’ ಎಂದು ಹೇಳಿತ್ತು. ಜೊತೆಗೆ, ಪ್ರತಿಭಟನೆಯನ್ನೂ ನಡೆಸಿತ್ತು.