<p><strong>ದಾವಣಗೆರೆ: </strong>129 ಮಂದಿಗೆ ಸೋಂಕು ಇರುವುದು ಶನಿವಾರ ದೃಢಪಟ್ಟಿದೆ. ವೃದ್ಧರೊಬ್ಬರು ಮೃತಪಟ್ಟಿದ್ದಾರೆ.</p>.<p>ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದ 65 ವರ್ಷದ ವೃದ್ಧ ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟವರು.</p>.<p>ದಾವಣಗೆರೆ ತಾಲ್ಲೂಕಿನಲ್ಲಿ 58, ಹರಿಹರ ತಾಲ್ಲೂಕಿನಲ್ಲಿ 26, ಹೊನ್ನಾಳಿ–ನ್ಯಾಮತಿ ತಾಲ್ಲೂಕಿನಲ್ಲಿ 21, ಚನ್ನಗಿರಿ ತಾಲ್ಲೂಕಿನಲ್ಲಿ 18 ಹಾಗೂ ಜಗಳೂರು ತಾಲ್ಲೂಕಿನಲ್ಲಿ 5 ಮಂದಿಗೆ ಕೊರೊನಾ ಬಂದಿದೆ. ದಾವಣಗೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಯ ಒಬ್ಬರಿಗೂ ಸೋಂಕು ತಗುಲಿದೆ.</p>.<p>ಜಿಲ್ಲೆಯಲ್ಲಿ ಈವರೆಗೆ 16,595 ಮಂದಿಗೆ ಕೊರೊನಾ ಬಂಇದೆ. 14,858 ಮಂದಿ ಗುಣಮುಖರಾಗಿದ್ದಾರೆ. 143 ಮಂದಿ ಮೃತಪಟ್ಟಿದ್ದಾರೆ. 1494 ಸಕ್ರಿಯ ಪ್ರಕರಣಗಳಿವೆ.</p>.<p>10 ಮಂದಿಗೆ ಕೊರೊನಾ</p>.<p>ಮಲೇಬೆನ್ನೂರು: ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ 10 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತಪಟ್ಟಿದೆ.</p>.<p>ನಿಟ್ಟೂರು ಗ್ರಾ,ಮದ ಮೂವರು ಪುರುಷರು, ನಾಲ್ವರು ಮಹಿಳೆಯರು, ಉಕ್ಕಡಗಾತ್ರಿಯ ತಲಾ ಒಬ್ಬ ಪುರುಷ, ಮಹಿಳೆಗೆ, ಆದಾಪುರದ ಒಬ್ಬ ಪುರುಷನಿಗೆ ಕೊರೊನಾ ದೃಢಪಟ್ಟಿದೆ.</p>.<p>ಜಾಗೃತಿ: ಪಟ್ಟಣದಲ್ಲಿ ಪುರಸಭೆ ಸಿಬ್ಬಂದಿ ಶನಿವಾರ ಮಾಸ್ಕ್ ಧರಿಸದೆ ಸಂಚರಿಸುವ ಸಾರ್ವಜನಿಕರಿಗೆ ` 500 ವಿಧಿಸುವ ಆದೇಶವನ್ನು ಪ್ರಚುರ ಪಡಿಸಲು ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.</p>.<p>ಸರ್ಕಾರದ ಹೊಸ ಆದೇಶದಂತೆ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಅರಿವು ಮೂಡಿಸುವುದು ಮುಖ್ಯ ಉದ್ದೇಶ ಎಂದು ಮುಖ್ಯಾಧಿಕಾರಿ ಇನ್ಸಿಡೆಂಟ್ ಕಮಾಂಡರ್ ಡಿ.ಎನ್. ಧರಣೀಂಧ್ರ ಕುಮಾರ್ ಮಾಹಿತಿ ನೀಡಿದರು.</p>.<p>ವಿಶೇಷ ತಂಡ ರಚಿಸಲಾಗಿದೆ. ನಿತ್ಯ ಬಸ್ಸು, ಕಾರು, ದ್ವಿಚಕ್ರ ವಾಹನಗಳು, ಅಂಗಡಿ, ಮಾರುಕಟ್ಟೆ, ಜನ ಸಂದಣಿ ಇರುವ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಈ ತಂಡ ದಂಡ ವಿಧಿಸಲಿದೆ. ಕಾನೂನು ಉಲ್ಲಂಘಿಸಿದರೆ ಪ್ರಕರಣ ದಾಖಲು ಮಾಡಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ: </strong>129 ಮಂದಿಗೆ ಸೋಂಕು ಇರುವುದು ಶನಿವಾರ ದೃಢಪಟ್ಟಿದೆ. ವೃದ್ಧರೊಬ್ಬರು ಮೃತಪಟ್ಟಿದ್ದಾರೆ.</p>.<p>ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದ 65 ವರ್ಷದ ವೃದ್ಧ ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟವರು.</p>.<p>ದಾವಣಗೆರೆ ತಾಲ್ಲೂಕಿನಲ್ಲಿ 58, ಹರಿಹರ ತಾಲ್ಲೂಕಿನಲ್ಲಿ 26, ಹೊನ್ನಾಳಿ–ನ್ಯಾಮತಿ ತಾಲ್ಲೂಕಿನಲ್ಲಿ 21, ಚನ್ನಗಿರಿ ತಾಲ್ಲೂಕಿನಲ್ಲಿ 18 ಹಾಗೂ ಜಗಳೂರು ತಾಲ್ಲೂಕಿನಲ್ಲಿ 5 ಮಂದಿಗೆ ಕೊರೊನಾ ಬಂದಿದೆ. ದಾವಣಗೆರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹೊರ ಜಿಲ್ಲೆಯ ಒಬ್ಬರಿಗೂ ಸೋಂಕು ತಗುಲಿದೆ.</p>.<p>ಜಿಲ್ಲೆಯಲ್ಲಿ ಈವರೆಗೆ 16,595 ಮಂದಿಗೆ ಕೊರೊನಾ ಬಂಇದೆ. 14,858 ಮಂದಿ ಗುಣಮುಖರಾಗಿದ್ದಾರೆ. 143 ಮಂದಿ ಮೃತಪಟ್ಟಿದ್ದಾರೆ. 1494 ಸಕ್ರಿಯ ಪ್ರಕರಣಗಳಿವೆ.</p>.<p>10 ಮಂದಿಗೆ ಕೊರೊನಾ</p>.<p>ಮಲೇಬೆನ್ನೂರು: ಹೋಬಳಿ ವ್ಯಾಪ್ತಿಯಲ್ಲಿ ಶನಿವಾರ 10 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತಪಟ್ಟಿದೆ.</p>.<p>ನಿಟ್ಟೂರು ಗ್ರಾ,ಮದ ಮೂವರು ಪುರುಷರು, ನಾಲ್ವರು ಮಹಿಳೆಯರು, ಉಕ್ಕಡಗಾತ್ರಿಯ ತಲಾ ಒಬ್ಬ ಪುರುಷ, ಮಹಿಳೆಗೆ, ಆದಾಪುರದ ಒಬ್ಬ ಪುರುಷನಿಗೆ ಕೊರೊನಾ ದೃಢಪಟ್ಟಿದೆ.</p>.<p>ಜಾಗೃತಿ: ಪಟ್ಟಣದಲ್ಲಿ ಪುರಸಭೆ ಸಿಬ್ಬಂದಿ ಶನಿವಾರ ಮಾಸ್ಕ್ ಧರಿಸದೆ ಸಂಚರಿಸುವ ಸಾರ್ವಜನಿಕರಿಗೆ ` 500 ವಿಧಿಸುವ ಆದೇಶವನ್ನು ಪ್ರಚುರ ಪಡಿಸಲು ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.</p>.<p>ಸರ್ಕಾರದ ಹೊಸ ಆದೇಶದಂತೆ ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಅರಿವು ಮೂಡಿಸುವುದು ಮುಖ್ಯ ಉದ್ದೇಶ ಎಂದು ಮುಖ್ಯಾಧಿಕಾರಿ ಇನ್ಸಿಡೆಂಟ್ ಕಮಾಂಡರ್ ಡಿ.ಎನ್. ಧರಣೀಂಧ್ರ ಕುಮಾರ್ ಮಾಹಿತಿ ನೀಡಿದರು.</p>.<p>ವಿಶೇಷ ತಂಡ ರಚಿಸಲಾಗಿದೆ. ನಿತ್ಯ ಬಸ್ಸು, ಕಾರು, ದ್ವಿಚಕ್ರ ವಾಹನಗಳು, ಅಂಗಡಿ, ಮಾರುಕಟ್ಟೆ, ಜನ ಸಂದಣಿ ಇರುವ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ಈ ತಂಡ ದಂಡ ವಿಧಿಸಲಿದೆ. ಕಾನೂನು ಉಲ್ಲಂಘಿಸಿದರೆ ಪ್ರಕರಣ ದಾಖಲು ಮಾಡಿಸಲಾಗುವುದು ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>