<p><strong>ಶಿವಮೊಗ್ಗ: </strong>ಜಾಗೃತ ಮತದಾರರು ಲೋಕಸಭೆ ಚುನಾವಣೆಯಲ್ಲಿ ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ದನ್ ತಿಳಿಸಿದರು.<br /> <br /> ನಗರದ ನೆಹರೂ ಕ್ರಿಡಾಂಗಣದಲ್ಲಿ ಶನಿವಾರ ಮತದಾರರ ಜಾಗೃತಿ ಅಂಗವಾಗಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಪ್ರಶಾಂತ್ ಜಾದೂಗಾರ್ ಅವರಿಂದ ಮತ ಜಾಗೃತಿ ಜಾದೂ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಚುನಾವಣೆಯಲ್ಲಿ ತಮ್ಮ ಭಾಗವಹಿಸುವಿಕೆ ಅತ್ಯಂತ ಪ್ರಮುಖ ಪಾತ್ರವಾಗಿದ್ದು, ಎಲ್ಲಾ ಮತದಾರರು ಜಾಗೃತರಾಗಿ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ಸಲಹೆ ನೀಡಿದರು.<br /> <br /> ಚುನಾವಣಾ ಆಯೋಗವು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಒತ್ತು ನೀಡಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದೆ. ಮತದಾರರು ಆಯೋಗದ ಉದ್ದೇಶಗಳನ್ನು ತಿಳಿದು, ಚುನಾವಣೆಯಲ್ಲಿ ಭಾಗವಹಿಸಬೇಕು ಎಂದರು.<br /> <br /> ನಂತರ ಜಾದೂಗಾರ ಪ್ರಶಾಂತ್ ಎಸ್.ಹೆಗಡೆ, ಇಬ್ಬರು ಮಕ್ಕಳೊಂದಿಗೆ ರಾಷ್ಟ್ರಧ್ವಜ, ಹಾರ, ಪುಷ್ಪ, ಭಾವಚಿತ್ರ, ಹಗ್ಗ ಕತ್ತರಿಸುವುದು ಮತ್ತು ಪುನಃ ಜೋಡಿಸುವುದು ಸೇರಿದಂತೆ ಹಲವು ವಿಸ್ಮಯಗಳನ್ನು ಜಾದೂ ಮೂಲಕ ತೋರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಾರ್ತಾಧಿಕಾರಿ ಹಿಮಂತರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಜಾಗೃತ ಮತದಾರರು ಲೋಕಸಭೆ ಚುನಾವಣೆಯಲ್ಲಿ ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜನಾರ್ದನ್ ತಿಳಿಸಿದರು.<br /> <br /> ನಗರದ ನೆಹರೂ ಕ್ರಿಡಾಂಗಣದಲ್ಲಿ ಶನಿವಾರ ಮತದಾರರ ಜಾಗೃತಿ ಅಂಗವಾಗಿ ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಪ್ರಶಾಂತ್ ಜಾದೂಗಾರ್ ಅವರಿಂದ ಮತ ಜಾಗೃತಿ ಜಾದೂ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಚುನಾವಣೆಯಲ್ಲಿ ತಮ್ಮ ಭಾಗವಹಿಸುವಿಕೆ ಅತ್ಯಂತ ಪ್ರಮುಖ ಪಾತ್ರವಾಗಿದ್ದು, ಎಲ್ಲಾ ಮತದಾರರು ಜಾಗೃತರಾಗಿ ತಮ್ಮ ಪ್ರತಿನಿಧಿಯನ್ನು ಆಯ್ಕೆ ಮಾಡುವಂತೆ ಸಲಹೆ ನೀಡಿದರು.<br /> <br /> ಚುನಾವಣಾ ಆಯೋಗವು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತ ಮತದಾನಕ್ಕೆ ಒತ್ತು ನೀಡಿ ಹಲವು ಕಾರ್ಯಕ್ರಮಗಳನ್ನು ಕೈಗೊಂಡಿದೆ. ಮತದಾರರು ಆಯೋಗದ ಉದ್ದೇಶಗಳನ್ನು ತಿಳಿದು, ಚುನಾವಣೆಯಲ್ಲಿ ಭಾಗವಹಿಸಬೇಕು ಎಂದರು.<br /> <br /> ನಂತರ ಜಾದೂಗಾರ ಪ್ರಶಾಂತ್ ಎಸ್.ಹೆಗಡೆ, ಇಬ್ಬರು ಮಕ್ಕಳೊಂದಿಗೆ ರಾಷ್ಟ್ರಧ್ವಜ, ಹಾರ, ಪುಷ್ಪ, ಭಾವಚಿತ್ರ, ಹಗ್ಗ ಕತ್ತರಿಸುವುದು ಮತ್ತು ಪುನಃ ಜೋಡಿಸುವುದು ಸೇರಿದಂತೆ ಹಲವು ವಿಸ್ಮಯಗಳನ್ನು ಜಾದೂ ಮೂಲಕ ತೋರಿಸಿಕೊಟ್ಟರು. ಕಾರ್ಯಕ್ರಮದಲ್ಲಿ ವಾರ್ತಾಧಿಕಾರಿ ಹಿಮಂತರಾಜು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>