<p><strong>ಶಿವಮೊಗ್ಗ:</strong> ಕಾಂಗ್ರೆಸ್ ಜಿಲ್ಲಾ ಘಟಕವು ಅಲ್ಪ ಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ಕಾಂಗ್ರೆಸ್ನಲ್ಲಿರುವ ಮುಖಂಡರು ಅಲ್ಪಸಂಖ್ಯಾತರನ್ನು ಕಡೆಗಣಿಸು ತ್ತಿರುವುದರಿಂದ ಬೇರೆ ಪಕ್ಷಗಳ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ದೂರಿದರು.<br /> <br /> ಆರ್.ಪ್ರಸನ್ನಕುಮಾರ ಹಾಗೂ ಮಂಜುನಾಥ ಭಂಡಾರಿ ಬೆಂಬಲಿಗರು, ಅಲ್ಪಸಂಖ್ಯಾತ ಮುಖಂಡರಿಗೆ ಮನ್ನಣೆ ನೀಡದೆ, ನಿಯಂತ್ರಿಸುತ್ತಿರುವುದರಿಂದ ಹಿರಿಯ ನಾಯಕರಿಗೆ ಮುಜುಗರವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಅಲ್ಪಸಂಖ್ಯಾತ ಮತಗಳು ಹಂಚಿಹೋಗದಂತೆ ಕೂಡಲೇ ತಡೆಯಬೇಕು. ಹಿರಿಯ ಮುಖಂಡರಿಗೆ ಪ್ರಾಧಾನ್ಯತೆ ನೀಡಬೇಕು ಎಂದು ಪದಾಧಿಕಾರಿಗಳು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ವಾಹಿದ್ ಅಡ್ಡು, ಕಾರ್ಯದರ್ಶಿ ರೆಹಮಾನ್ ಸಾಬ್ ಮತ್ತಿತರರು ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಕಾಂಗ್ರೆಸ್ ಜಿಲ್ಲಾ ಘಟಕವು ಅಲ್ಪ ಸಂಖ್ಯಾತರನ್ನು ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ವಿಭಾಗದ ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ಭವನದ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.<br /> <br /> ಕಾಂಗ್ರೆಸ್ನಲ್ಲಿರುವ ಮುಖಂಡರು ಅಲ್ಪಸಂಖ್ಯಾತರನ್ನು ಕಡೆಗಣಿಸು ತ್ತಿರುವುದರಿಂದ ಬೇರೆ ಪಕ್ಷಗಳ ಕಡೆಗೆ ಒಲವು ತೋರುತ್ತಿದ್ದಾರೆ. ಇದರಿಂದ ಪಕ್ಷದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ದೂರಿದರು.<br /> <br /> ಆರ್.ಪ್ರಸನ್ನಕುಮಾರ ಹಾಗೂ ಮಂಜುನಾಥ ಭಂಡಾರಿ ಬೆಂಬಲಿಗರು, ಅಲ್ಪಸಂಖ್ಯಾತ ಮುಖಂಡರಿಗೆ ಮನ್ನಣೆ ನೀಡದೆ, ನಿಯಂತ್ರಿಸುತ್ತಿರುವುದರಿಂದ ಹಿರಿಯ ನಾಯಕರಿಗೆ ಮುಜುಗರವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಅಲ್ಪಸಂಖ್ಯಾತ ಮತಗಳು ಹಂಚಿಹೋಗದಂತೆ ಕೂಡಲೇ ತಡೆಯಬೇಕು. ಹಿರಿಯ ಮುಖಂಡರಿಗೆ ಪ್ರಾಧಾನ್ಯತೆ ನೀಡಬೇಕು ಎಂದು ಪದಾಧಿಕಾರಿಗಳು ಆಗ್ರಹಿಸಿದರು.<br /> <br /> ಪ್ರತಿಭಟನೆಯ ನೇತೃತ್ವವನ್ನು ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಸೈಯದ್ ವಾಹಿದ್ ಅಡ್ಡು, ಕಾರ್ಯದರ್ಶಿ ರೆಹಮಾನ್ ಸಾಬ್ ಮತ್ತಿತರರು ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>