<p><strong>ಬೆಂಗಳೂರು: </strong>`ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘವು ಏ.27 ರಂದು ನಡೆಸಲಿರುವ ಮುಷ್ಕರಕ್ಕೆ ತಮ್ಮ ಬೆಂಬಲವಿಲ್ಲ~ ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘದ ಒಕ್ಕೂಟವು ಹೇಳಿದೆ.<br /> <br /> ಭಾರತೀಯ ಮಜ್ದೂರ ಸಂಘ ಕರ್ನಾಟಕ ಪ್ರಾಂತದ ಅಧ್ಯಕ್ಷ ಕೆ.ರಾಮಕೃಷ್ಣ ಪೂಂಜಾ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಅಧಿಕಾರಿಗಳ ಮತ್ತು ಕಾರ್ಮಿಕರ ವೇತನ ಪರಿಷ್ಕರಣೆಯ ಬಗ್ಗೆ ಸರ್ಕಾರದ ಜತೆಗೆ ಹಲವಾರು ಸುತ್ತಿನ ಮಾತುಕತೆ ನಡೆದಿದೆ~ ಎಂದರು.<br /> <br /> `ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮತ್ತು ಸಾರಿಗೆ ಸಚಿವ ಆರ್. ಅಶೋಕ ಅವರನ್ನು ಕಾರ್ಮಿಕರ ಜೀವನಕ್ಕೆ ಅನುಕೂಲವಾಗುವಂತಹ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವಂತೆ ಭೇಟಿ ಮಾಡಿ ಚರ್ಚಿಸಲಾಗಿದೆ. ಮುಖ್ಯಮಂತ್ರಿಯವರು ಈ ಬಗ್ಗೆ ಪರಿಶೀಲಿಸಿ ಬೇಡಿಕೆಯನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ~ ಎಂದು ವಿವರಿಸಿದರು.<br /> <br /> `ಇಂತಹ ಸಂದರ್ಭದಲ್ಲಿ ಮುಷ್ಕರ ಹೂಡುವ ಅವಶ್ಯಕತೆ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘವು ಮುಷ್ಕರ ಹೂಡಿರುವುದು ಸರಿಯಲ್ಲ. ಸಂಧಾನ ಮುಖೇನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಈ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ~ ಎಂದು ಹೇಳಿದರು.<br /> <br /> ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸನ್ನ, ಈಶಾನ್ಯ ರಸ್ತೆ ಸಾರಿಗೆ ಮಜ್ದೂರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘವು ಏ.27 ರಂದು ನಡೆಸಲಿರುವ ಮುಷ್ಕರಕ್ಕೆ ತಮ್ಮ ಬೆಂಬಲವಿಲ್ಲ~ ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘದ ಒಕ್ಕೂಟವು ಹೇಳಿದೆ.<br /> <br /> ಭಾರತೀಯ ಮಜ್ದೂರ ಸಂಘ ಕರ್ನಾಟಕ ಪ್ರಾಂತದ ಅಧ್ಯಕ್ಷ ಕೆ.ರಾಮಕೃಷ್ಣ ಪೂಂಜಾ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಅಧಿಕಾರಿಗಳ ಮತ್ತು ಕಾರ್ಮಿಕರ ವೇತನ ಪರಿಷ್ಕರಣೆಯ ಬಗ್ಗೆ ಸರ್ಕಾರದ ಜತೆಗೆ ಹಲವಾರು ಸುತ್ತಿನ ಮಾತುಕತೆ ನಡೆದಿದೆ~ ಎಂದರು.<br /> <br /> `ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಮತ್ತು ಸಾರಿಗೆ ಸಚಿವ ಆರ್. ಅಶೋಕ ಅವರನ್ನು ಕಾರ್ಮಿಕರ ಜೀವನಕ್ಕೆ ಅನುಕೂಲವಾಗುವಂತಹ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವಂತೆ ಭೇಟಿ ಮಾಡಿ ಚರ್ಚಿಸಲಾಗಿದೆ. ಮುಖ್ಯಮಂತ್ರಿಯವರು ಈ ಬಗ್ಗೆ ಪರಿಶೀಲಿಸಿ ಬೇಡಿಕೆಯನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ~ ಎಂದು ವಿವರಿಸಿದರು.<br /> <br /> `ಇಂತಹ ಸಂದರ್ಭದಲ್ಲಿ ಮುಷ್ಕರ ಹೂಡುವ ಅವಶ್ಯಕತೆ ಇರಲಿಲ್ಲ. ಆದರೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘವು ಮುಷ್ಕರ ಹೂಡಿರುವುದು ಸರಿಯಲ್ಲ. ಸಂಧಾನ ಮುಖೇನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದಾಗಿದೆ. ಈ ಮುಷ್ಕರಕ್ಕೆ ನಮ್ಮ ಬೆಂಬಲವಿಲ್ಲ~ ಎಂದು ಹೇಳಿದರು.<br /> <br /> ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸನ್ನ, ಈಶಾನ್ಯ ರಸ್ತೆ ಸಾರಿಗೆ ಮಜ್ದೂರ ಸಂಘದ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>