ಶಾಸಕ ವಾಸು ಮಾತನಾಡಿ, ‘ಕೆ.ಆರ್.ಆಸ್ಪತ್ರೆ ಮೇಲೆ ಮಂಡ್ಯ, ಚಾಮರಾಜನಗರ, ಕೊಡಗು ಜಿಲ್ಲೆಗಳಿಂದ ಅಗಾಧ ಒತ್ತಡ ಇದೆ. ಅಲ್ಲಿನ ಸಾರ್ವಜನಿಕರು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ. ಆಸ್ಪತ್ರೆಯನ್ನು ಉನ್ನತೀಕರಿಸಲು ಯೋಜನೆ ರೂಪಿಸಲು ಮನವಿ ಮಾಡಲಾಗಿದೆ’ ಎಂದರು. ಸಚಿವರು ಸ್ಯಾನಿಟೋರಿಯಂ ಆಸ್ಪತ್ರೆಗೂ ತೆರಳಿ ಪರಿಶೀಲನೆ ನಡೆಸಿದರು.