‘ಕನಿಷ್ಠ ವೇತನ ನೀಡುವಂತೆ ಒತ್ತಾಯಿಸಿ ಬಾರಿ ಆಡಳಿತ ಮಂಡಳಿಗೆ ಈಗಾಗಲೇ ಹಲವಾರು ಮನವಿ ಮಾಡಿದ್ದೇನೆ. ಆದರೆ, ತಮ್ಮ ಮನವಿಗೆ ಯಾರೂ ಸ್ಪಂದಿಸುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಬಳಿಯೂ ದೂರು ನೀಡಿದ್ದೇನೆ. ಅವರು ವಿಚಾರಣೆ ನಡೆಸಿ ಸಫಾಯಿ ಕರ್ಮಚಾರಿಗಳಿಗೆ ಸಂಬಂಧಿಸಿದ ಕಾಯ್ದೆಯಂತೆ ವೇತನ ನೀಡಬೇಕು ಎಂದು ಆದೇಶಿಸಿದ್ದಾರೆ. ಆದರೂ ಆಡಳಿತ ಮಂಡಳಿ ಇದಕ್ಕೆ ಒಪ್ಪದೇ ಅನ್ಯಾಯ ಎಸಗುತ್ತಿದೆ’ ಎಂದು ಆರೋಪಿಸಿದರು.