<p><strong>ಮೈಸೂರು:</strong> ಜಂತುಹುಳು ಔಷಧಿ ಕುಡಿದ 96 ಕುರಿಗಳು ಸಾವಿಗೀಡಾದ ಘಟನೆ ತಾಲ್ಲೂಕಿನ ಇಲವಾಲ ಹೋಬಳಿ ಹುಯಿಲಾಳು ಗ್ರಾಮದ ಹೊರವಲಯದಲ್ಲಿ ಮಂಗಳವಾರ ನಡೆದಿದೆ.<br /> <br /> ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹೊನಗಾನಹಳ್ಳಿಯ ರಮೇಶ್, ರಾಮಕೃಷ್ಣ, ಪುಟ್ಟಮ್ಮ ಎಂಬುವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಹುಯಿಲಾಳು ಗ್ರಾಮದ ಹೊರ ವಲಯದಲ್ಲಿ ಕುರಿ ಮಾಲೀಕರು ಬೀಡು ಬಿಟ್ಟಿದ್ದರು. ಸುಮಾರು 1,500 ಕುರಿಗಳಿಗೆ ಸೋಮವಾರ ಜಂತುಹುಳು ನಾಶಕ ಔಷಧಿ ನೀಡಲಾಗಿತ್ತು. ಈ ಪೈಕಿ 96 ಕುರಿಗಳು ಅಸ್ವಸ್ಥಗೊಂಡು ಸಾವಿಗೀಡಾದವು. <br /> <br /> ವಿಷಯ ತಿಳಿದ ಪಶುವೈದ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಸಾವಿನ ದವಡೆಯಲ್ಲಿ ಸಿಲುಕಿದ್ದ ಕುರಿಗಳಿಗೆ ಔಷಧಿ ನೀಡಿದರು. <br /> <br /> ಸಂಸದ ಅಡಗೂರು ಎಚ್.ವಿಶ್ವನಾಥ್, ಶಾಸಕ ಎಂ.ಸತ್ಯನಾರಾಯಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕುರಿಗಳ ಸಾವಿನಿಂದ ರೂ 5 ಲಕ್ಷ ನಷ್ಟವಾಗಿದೆ ಎಂದು ಮಾಲೀಕರು ಹೇಳಿದರು.<br /> <br /> `ಜಂತುಹುಳು ಔಷಧಿಯನ್ನು ಇಂತಿಷ್ಟು ಪ್ರಮಾಣದಲ್ಲಿ ನೀಡಬೇಕು. ಮೂರು ತಿಂಗಳ ಮರಿಗಳಿಗೆ ಔಷಧಿ ನೀಡುವಂತಿಲ್ಲ. ಆದರೆ ಜಂತುಹುಳು ಔಷಧಿಯನ್ನು ನೀರಿನಲ್ಲಿ ಬೆರೆಸಿ ಸಾಮೂಹಿಕವಾಗಿ ಕುರಿಗಳಿಗೆ ನೀಡಿದ್ದರಿಂದ ಔಷಧಿ ಪ್ರಮಾಣ ಹೆಚ್ಚಾಗಿ ಕುರಿಗಳು ಸಾವನ್ನಪ್ಪಿವೆ~ ಎಂದು ಪಶುವೈದ್ಯಾಧಿಕಾರಿ ಡಾ.ನಾಗರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಂತುಹುಳು ಔಷಧಿ ಕುಡಿದ 96 ಕುರಿಗಳು ಸಾವಿಗೀಡಾದ ಘಟನೆ ತಾಲ್ಲೂಕಿನ ಇಲವಾಲ ಹೋಬಳಿ ಹುಯಿಲಾಳು ಗ್ರಾಮದ ಹೊರವಲಯದಲ್ಲಿ ಮಂಗಳವಾರ ನಡೆದಿದೆ.<br /> <br /> ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹೊನಗಾನಹಳ್ಳಿಯ ರಮೇಶ್, ರಾಮಕೃಷ್ಣ, ಪುಟ್ಟಮ್ಮ ಎಂಬುವರಿಗೆ ಸೇರಿದ ಕುರಿಗಳು ಸಾವನ್ನಪ್ಪಿವೆ. ಹುಯಿಲಾಳು ಗ್ರಾಮದ ಹೊರ ವಲಯದಲ್ಲಿ ಕುರಿ ಮಾಲೀಕರು ಬೀಡು ಬಿಟ್ಟಿದ್ದರು. ಸುಮಾರು 1,500 ಕುರಿಗಳಿಗೆ ಸೋಮವಾರ ಜಂತುಹುಳು ನಾಶಕ ಔಷಧಿ ನೀಡಲಾಗಿತ್ತು. ಈ ಪೈಕಿ 96 ಕುರಿಗಳು ಅಸ್ವಸ್ಥಗೊಂಡು ಸಾವಿಗೀಡಾದವು. <br /> <br /> ವಿಷಯ ತಿಳಿದ ಪಶುವೈದ್ಯಾಧಿಕಾರಿಗಳು ಸ್ಥಳಕ್ಕೆ ತೆರಳಿ ಸಾವಿನ ದವಡೆಯಲ್ಲಿ ಸಿಲುಕಿದ್ದ ಕುರಿಗಳಿಗೆ ಔಷಧಿ ನೀಡಿದರು. <br /> <br /> ಸಂಸದ ಅಡಗೂರು ಎಚ್.ವಿಶ್ವನಾಥ್, ಶಾಸಕ ಎಂ.ಸತ್ಯನಾರಾಯಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕುರಿಗಳ ಸಾವಿನಿಂದ ರೂ 5 ಲಕ್ಷ ನಷ್ಟವಾಗಿದೆ ಎಂದು ಮಾಲೀಕರು ಹೇಳಿದರು.<br /> <br /> `ಜಂತುಹುಳು ಔಷಧಿಯನ್ನು ಇಂತಿಷ್ಟು ಪ್ರಮಾಣದಲ್ಲಿ ನೀಡಬೇಕು. ಮೂರು ತಿಂಗಳ ಮರಿಗಳಿಗೆ ಔಷಧಿ ನೀಡುವಂತಿಲ್ಲ. ಆದರೆ ಜಂತುಹುಳು ಔಷಧಿಯನ್ನು ನೀರಿನಲ್ಲಿ ಬೆರೆಸಿ ಸಾಮೂಹಿಕವಾಗಿ ಕುರಿಗಳಿಗೆ ನೀಡಿದ್ದರಿಂದ ಔಷಧಿ ಪ್ರಮಾಣ ಹೆಚ್ಚಾಗಿ ಕುರಿಗಳು ಸಾವನ್ನಪ್ಪಿವೆ~ ಎಂದು ಪಶುವೈದ್ಯಾಧಿಕಾರಿ ಡಾ.ನಾಗರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>