ಜಿಲ್ಲೆಯಲ್ಲಿ ರಾತ್ರಿ ಓಡಾಟಕ್ಕೆ ನಿರ್ಬಂಧ ಹೇರಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂಥ ಪರಿಸ್ಥಿತಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಧಾರ್ಮಿಕ ಮುಖಂಡರು, ವ್ಯಾಪಾರಿಗಳು, ಉದ್ಯಮಿಗಳು, ಸಂಘಗಳ ಮುಖಂಡರು, ಸೇವಾ ಸಂಸ್ಥೆಗಳು, ಸಾಂಸ್ಕೃತಿಕ ಜಗತ್ತಿನ ಪ್ರತಿನಿಧಿಗಳು, ವಿದ್ಯಾ ಸಂಸ್ಥೆಗಳ ಪ್ರಮುಖರು, ವಿದ್ಯಾರ್ಥಿ ನಾಯಕರು ಮತ್ತಿತರರ ಜೊತೆ ಶಾಂತಿ ಸಭೆ ನಡೆಸಬೇಕು ಎಂದು ಕೋರಲಾಗಿದೆ.