ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ಕೆಎಸ್‌ಆರ್‌ಟಿಸಿ ಬಸ್‌ ಹರಿದು ಯುವಕ ಸಾವು

Last Updated 25 ಫೆಬ್ರುವರಿ 2021, 6:34 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ತಾಲ್ಲೂಕಿನ ಮಲ್ಲೇನಹಳ್ಳಿ ಬಳಿ (ಕುಮಾರಗಿರಿ) ಕೆಎಸ್‌ಆರ್‌ಟಿಸಿ ಬಸ್‌ ಹರಿದು ಯುವ ಕಾಂಗ್ರೆಸ್‌ ಕಾರ್ಯಕರ್ತ ಎನ್‌.ಜಿ.ಮಿಥುನ್‌(21) ಬುಧವಾರ ಸಾವಿಗೀಡಾಗಿದ್ದಾರೆ.

ಮಿಥುನ್‌ ಅವರು ತರೀಕೆರೆ ತಾಲ್ಲೂಕಿನ ನೇರಲಕೆರೆ ಗ್ರಾಮದವರು. ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತನೊಂದಿಗೆ ಚಿಕ್ಕಮಗಳೂರಿಗೆ ಬೈಕ್‌ನಲ್ಲಿ ತೆರಳುವಾಗ ಬೆಳಿಗ್ಗೆ 11 ಗಂಟೆ ಹೊತ್ತಿನಲ್ಲಿ ಅವಘಡ ಸಂಭವಿಸಿದೆ.

ಮಲ್ಲೇನಹಳ್ಳಿ ಬಳಿ ವಿದ್ಯುತ್‌ ಮಾರ್ಗದ ಕಾರ್ಯ ಚಾಲ್ತಿಯಲ್ಲಿದ್ದು, ಮಾರ್ಗದಲ್ಲಿ ನೆಡಲು ಕಂಬಗಳನ್ನು ರಸ್ತೆಯಲ್ಲಿ ಇಡಲಾಗಿತ್ತು. ತರೀಕೆರೆಯಿಂದ ಚಿಕ್ಕಮಗಳೂರು ಕಡೆಗೆ ಬರುತ್ತಿದ್ದ ವ್ಯಾನ್‌ನ ಚಾಲಕ ಕಂಬ ಗಮನಿಸಿ ವ್ಯಾನ್‌ ನಿಲ್ಲಿಸಿದ್ದಾರೆ. ವ್ಯಾನ್‌ ಹಿಂದಿದ್ದ ಬೈಕ್‌ನ ಸವಾರ ಆಗ ಬ್ರೇಕ್‌ ಹಾಕಿದಾಗ ಹಿಂಬದಿ ಸವಾರ ಮಿಥುನ್‌ ಬಲಭಾಗಕ್ಕೆ ಬಿದ್ದಿದ್ದಾರೆ. ಎದುರುಗಡೆ ಬರುತ್ತಿದ್ದ (ತರೀಕೆರೆ ಕಡೆಗೆ ಸಂಚರಿಸುತ್ತಿದ್ದ) ಕೆಎಸ್‌ಆರ್‌ಟಿಸಿ ಬಸ್‌ ಆತನ ಮೇಲೆ ಹರಿದಿದೆ. ತೀವ್ರ ಗಾಯಗೊಂಡಿದ್ದ ಮಿಥುನ್‌ ಆಸ್ಪತ್ರೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದ್ದಾರೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT