ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೂತನ ಆಸ್ಪತ್ರೆ ಶೀಘ್ರವೇ ಲೋಕಾರ್ಪಣೆ

Last Updated 20 ಫೆಬ್ರುವರಿ 2018, 6:08 IST
ಅಕ್ಷರ ಗಾತ್ರ

ಮದ್ದೂರು: ‘₹ 5ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಆಸ್ಪತ್ರೆ ಕಟ್ಟಡವನ್ನು ಶೀಘ್ರದಲ್ಲಿಯೇ ಲೋಕಾರ್ಪಣೆಮಾಡಲಾಗುವುದು’ ಎಂದು ಶಾಸಕ ಡಿ.ಸಿ. ತಮ್ಮಣ್ಣ ಹೇಳಿದರು.

ಪಟ್ಟಣದ ಕೆ. ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ಸೋಮವಾರ ಉದ್ಘಾಟಿಸಿದ ಅವರು, ‘ಹಳೆ ಕಟ್ಟಡದ ನವೀಕರಣಕ್ಕೆ ₹ 1.5 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಕಾಂಪೌಂಡ್ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ’ ಎಂದರು.

‘ಬಹು ವರ್ಷಗಳ ಹಿಂದೆಯೇ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರವನ್ನು ತೆರೆಯವಂತೆ ಇಲ್ಲಿನ ಜನರ ಬೇಡಿಕೆ ಇಟ್ಟಿದ್ದರು. ರೋಗಿಗಳಿಗೆ ಅನುಕೂಲವಾಗುವಂತೆ ಸುಸಜ್ಜಿತವಾದ 2 ಹಾಸಿಗೆಯ ಡಯಾಲಿಸಿಸ್ ಕೇಂದ್ರವನ್ನು ಆರಂಭ ಮಾಡಲಾಗದೆ. ಮೂತ್ರಪಿಂಡ ಕಾಯಿಲೆಗೆ ತುತ್ತಾದ ರೋಗಿಗಳು ಈ ಕೇಂದ್ರದ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಮನವಿ ಮಾಡಿದರು.

ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶಶಿಕಲಾ, ಡಾ.ಅಶ್ವತ್ಥ, ಡಾ. ಬೆಟ್ಟಸ್ವಾಮಿ, ಡಾ.ಭವಾನಿಶಂಕರ್, ಡಾ.ಮೋಹನ್ ಮುಖಂಡರಾದ ಕೆ.ದಾಸೇಗೌಡ, ಗುಂಡ ಮಹೇಶ್ ಇನ್ನಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT