ಸಂಸದ ಬಿ.ವೈ. ರಾಘವೇಂದ್ರ ಶಾಲು, ಹಾರ ಹಾಕುವ ಮೂಲಕ ಅವರನ್ನು ಸ್ವಾಗತಿಸಿದರು. ಶಾ ಅವರ ಜತೆ, ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಶಾಸಕ ಕೆ.ಎಸ್.ಈಶ್ವರಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರುದ್ರೇಗೌಡ, ವಿಶ್ವೇಶ್ವರ ಹೆಗಡೆ ಕಾಗೇರಿ, ಎಸ್. ದತ್ತಾತ್ರಿ, ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ಕ್ಷೇತ್ರ ಪ್ರಭಾರಿ ವಿ. ಕದಿರೇಶ್, ಗ್ರಾಮಾಂತರ ಅಧ್ಯಕ್ಷ ಮಂಗೋಟೆ ರುದ್ರೇಶ್, ನಗರಾಧ್ಯಕ್ಷ ಜಿ. ಆನಂದಕುಮಾರ್, ಮಹಿಳಾ ಆಯೋಗ ಮಾಜಿ ಅಧ್ಯಕ್ಷೆ ಸಿ.ಮಂಜುಳಾ ಸಾಥ್ ನೀಡಿದರು.