ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆಯ ಆತಂಕ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಅತ್ಮಹತ್ಯೆ

Last Updated 28 ಜನವರಿ 2019, 14:25 IST
ಅಕ್ಷರ ಗಾತ್ರ

ಆನವಟ್ಟಿ(ಶಿವಮೊಗ್ಗ ಜಿಲ್ಲೆ): ಪರೀಕ್ಷೆಯ ಭಯದಿಂದ ಮಾನಸಿಕ ಖಿನ್ನತೆ ಒಳಗಾದ ವಿದ್ಯಾರ್ಥಿಯೊಬ್ಬ ಭಾನುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇಲ್ಲಿನ ನೆಹರೂ ನಗರ ಬಡಾವಣೆಯ ನಿವಾಸಿ ಈಶ್ವರಪ್ಪ(ಟೈಲರಿಂಗ್) ಅವರ ಮಗ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 10ನೇ ತರಗತಿಯ ನೂತನ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ವಿದ್ಯಾರ್ಥಿಯೂ ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ಮಾನಸಿಕ ಒತ್ತಡಕ್ಕೆ ಒಳಗಾಗಿ, ಪರೀಕ್ಷೆಯ ಆತಂಕ ಹಾಗೂ ಜಿಗುಪ್ಸೆಯಿಂದ ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಅತ್ಮಹತ್ಯೆಗೆ ಶರಣನಾಗಿದ್ದಾನೆ. ಪ್ರಕರಣ ಆನವಟ್ಟಿ ಪೋಲೀಸ್ ಠಾಣೆಯಲ್ಲಿ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT