ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ಗೆ ಕಾಂಗ್ರೆಸ್‌ ಮುಖಂಡರ ಬೆಂಬಲ

Last Updated 27 ಮಾರ್ಚ್ 2018, 6:20 IST
ಅಕ್ಷರ ಗಾತ್ರ

ಚಿಂತಾಮಣಿ: ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾಲ್ಲೂಕಿನ ಚಿಲಕಲನೇರ್ಪು ಹೋಬಳಿಯಲ್ಲಿ ಕಾಂಗ್ರೆಸ್‌ ಪಕ್ಷದ ಕೆಲವು ಪ್ರಭಾವಿ ಮುಖಂಡರು ಜೆಡಿಎಸ್‌ ಅಭ್ಯರ್ಥಿ ರವಿಕುಮಾರ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಚಿಲಕಲನೇರ್ಪು ಹೋಬಳಿಯಲ್ಲಿ ಸೋಮವಾರ ರವಿಕುಮಾರ್‌ ಹಮ್ಮಿಕೊಂಡಿದ್ದ ಜೆಡಿಎಸ್‌ ಕಾರ್ಯಕರ್ತರ ಸಮಾವೇಶವನ್ನು ಕಾಂಗ್ರೆಸ್‌ ಮುಖಂಡ ನಂದನವನಂ ಶ್ರೀರಾಮರೆಡ್ಡಿ ಉದ್ಘಾಟಿಸಿದ್ದು ವಿಶೇಷವಾಗಿತ್ತು.

ಅಭ್ಯರ್ಥಿ ಮೇಲೂರು ರವಿಕುಮಾರ್‌ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ತನು, ಮನ, ಧನವನ್ನು ಅರ್ಪಿಸಿ ಪಕ್ಷವನ್ನು ಅಧಿಕಾರಕ್ಕೆ ತಂದೆವು. ಶಾಸಕ ರಾಜಣ್ಣ ಅಧಿಕಾರಕ್ಕೆ ಬಂದ ನಂತರ ಬೆಂಬಲಿಗರನ್ನು ಕಡೆಗಣಿಸಿ ದ್ರೋಹ ಬಗೆದಿದ್ದಾರೆ. ಕ್ಷೇತ್ರವನ್ನು ಅಭಿವೃದ್ಧಿಪಡಿಸದೆ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಮುಖಂಡ ನಂದನವನಂ ಶ್ರೀರಾಮರೆಡ್ಡಿ ಮಾತನಾಡಿ, ಶಿಡ್ಲಘಟ್ಟ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿ. ಮುನಿಯಪ್ಪ ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ. ಕಾಂಗ್ರೆಸ್‌ ಕೀಳು ರಾಜಕಾರಣಕ್ಕೆ ಬೇಸತ್ತು ಜೆಡಿಎಸ್‌ ಅಭ್ಯರ್ಥಿಗೆ ಬೆಂಬಲ ನೀಡುತ್ತಿರುವುದಾಗಿ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್‌ಮುನಿಯಪ್ಪ, ತನುಜಾರಘು, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಶಿವಣ್ಣ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ಉಪಾಧ್ಯಕ್ಷ ಎಚ್‌.ನರಸಿಂಹಯ್ಯ, ಮುಖಂಡರಾದ ಕೆಂಚಾರ್ಲಹಳ್ಳಿ ಕೃಷ್ಣಾರೆಡ್ಡಿ, ಕೋಡೆಗಂಡ್ಲು ನಾರಾಯಣಸ್ವಾಮಿ,ತುಳವನೂರು ರವಿ, ರಾಜೇಶ್‌, ಮೇಲೂರು ಮಂಜುನಾಥ್‌, ಲಕ್ಷ್ಮೀಪತಿ, ಮಂಜುನಾಥಗೌಡ, ಶಿವಮೂರ್ತಿ, ಯರ್ರಬಚ್ಚಪ್ಪ, ರಾಮಣ್ಣ, ಜಬ್ಬೀರ್‌ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT