ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿ.ಎ. ಓದುತ್ತಿರುವ ನಗರ ಮೂಡುಗೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಡಸೆ ಗ್ರಾಮದ ಐಶ್ವರ್ಯ, ಪಿಯುಸಿ ಓದುತ್ತಿದ್ದಾಗ ಪ್ರಧಾನಿಗೆ ಪತ್ರ ಬರೆದಿದ್ದರು. ಹಾಳಾಗಿರುವ 2 ಕಿ.ಮೀ ಉದ್ದದ ಸಂಪರ್ಕ ರಸ್ತೆ ಅಭಿವೃದ್ಧಿಗೊಳಿಸುವಂತೆ ಕೋರಿದ್ದರು. ಪ್ರಧಾನಿ ಕಚೇರಿಯು ಈ ಬಗ್ಗೆ ಕ್ರಮ ಕೈಗೊಳ್ಳು ವಂತೆ ರಾಜ್ಯದ ಮುಖ್ಯಕಾರ್ಯದ ರ್ಶಿಗೆ ಪತ್ರ ರವಾನಿಸಿತ್ತು. ಇದಕ್ಕೆ ಜಿಲ್ಲಾ ಪಂಚಾಯ್ತಿಯಿಂದ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ನಂತರ ಐಶ್ವರ್ಯ ಸಂಸದ ಬಿ.ವೈ. ರಾಘವೇಂದ್ರ ಮತ್ತು ಶಾಸಕ ಜ್ಞಾನೇಂದ್ರ ಅವರನ್ನು ಸಂಪರ್ಕಿಸಿದ್ದರು.