<p><strong>ದೇವರಹಿಪ್ಪರಗಿ (ವಿಜಯಪುರ): </strong>ಹಾಸ್ಟೆಲ್ ಅವ್ಯವಸ್ಥೆಯ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಿರಿಯ ವಿದ್ಯಾರ್ಥಿಗಳನ್ನು, ಕೆಲ ಹಿರಿಯ ವಿದ್ಯಾರ್ಥಿಗಳು ಬುಧವಾರ ರಾತ್ರಿ ಥಳಿಸಿದ್ದಾರೆ.</p>.<p>ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಹಾಸ್ಟೆಲ್ಗೆ ಭೇಟಿ ನೀಡಿ, ಅಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಸಿಬ್ಬಂದಿಗೆ ಎಚ್ಚರಿಕೆ ನೀಡಿ ಹೋಗಿದ್ದರು. ಇದಾದ ಬಳಿಕ 10ನೇ ತರಗತಿಯ ಕೆಲ ವಿದ್ಯಾರ್ಥಿಗಳು ದೂರು ನೀಡಿದ್ದ ಮೂವರು ಬಾಲಕರನ್ನು ಕೋಣೆಯಲ್ಲಿ ಕೂಡಿಹಾಕಿ ಥಳಿಸಿದ್ದಾರೆ. ಈ ಸಮಯದಲ್ಲಿ ಹಾಸ್ಟೆಲ್ ಮೇಲ್ವಿಚಾರಕ ಹಾಗೂ ಗುತ್ತಿಗೆ ಆಧಾರದ ಸಿಬ್ಬಂದಿ ವಸತಿ ನಿಲಯದಲ್ಲಿ ಇರಲಿಲ್ಲ ಎನ್ನಲಾಗಿದೆ.</p>.<p>ಈ ಬಗ್ಗೆ ಮೇಲ್ವಿಚಾರಕ ಅಜರುದ್ದೀನ್ ಮುಲ್ಲಾ ಅವರನ್ನು ಪ್ರಶ್ನಿಸಿದಾಗ, ‘ಇದು ಮಕ್ಕಳ ಜಗಳ. ಹಿರಿಯ ವಿದ್ಯಾರ್ಥಿಗಳು ನನ್ನ ಅಭಿಮಾನಿಗಳು. ಡಿ.ಸಿ.ಗೆ ಕಿರಿಯ ವಿದ್ಯಾರ್ಥಿಗಳು ದೂರು ನೀಡಿದ್ದರಿಂದ ಕೋಪಗೊಂಡ ಅವರು, ನನ್ನ ಮೇಲಿನ ಅಭಿಮಾನದಿಂದ ನಾಲ್ಕು ಏಟು ಹೊಡೆದಿರಬಹುದು. ಆ ಸಮಯದಲ್ಲಿ ನಾನು ವಸತಿ ನಿಲಯದಲ್ಲಿ ಇರಲಿಲ್ಲ. ಈ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ’ ಎಂದರು.</p>.<p>‘ಗುತ್ತಿಗೆ ಸಿಬ್ಬಂದಿ ಲಾಲಸಾಬ್ ಟಕ್ಕಳಕಿ ಅವರೇ ಹಿರಿಯ ವಿದ್ಯಾರ್ಥಿಗಳಿಗೆ ಹೇಳಿ, ನಮ್ಮನ್ನು ಚಾದರ್ನಲ್ಲಿ ಕಟ್ಟಿ, ಬಾಗಿಲು ಹಾಕಿ ಹೊಡೆಸಿದ್ದಾರೆ. ನಮ್ಮನ್ನು ಹೊಡೆದವರು ವಸತಿ ನಿಲಯದಲ್ಲಿ ಬೀಡಿ, ಸಿಗರೇಟ್ ಸೇದುತ್ತಾರೆ. ಶಾಲೆಗೂ ಸರಿಯಾಗಿ ಹೋಗುವುದಿಲ್ಲ. ಅವರಿಗೆ ವಾರ್ಡನ್ ಏನೂ ಹೇಳುವುದಿಲ್ಲ. ಈ ವಿಷಯವನ್ನು ನಾವು ಹೇಳಿದ್ದೇವೆ ಎಂದು ಗೊತ್ತಾದರೆ, ನಮ್ಮನ್ನು ಮತ್ತೆ ಹೊಡೆಯುತ್ತಾರೆ. ನಮಗೆ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು ಏಟು ತಿಂದ ಕಿರಿಯ ವಿದ್ಯಾರ್ಥಿಗಳು ‘ಪ್ರಜಾವಾಣಿ’ ಎದುರು ಅಳಲು ತೋಡಿಕೊಂಡರು.</p>.<p>‘ಈ ಬಗ್ಗೆ ವಿವರವಾದ ವರದಿ ನೀಡುವಂತೆ ಅಧಿಕಾರಿಗಳು ಹಾಗೂ ವಸತಿ ನಿಲಯದ ಮೇಲ್ವಿಚಾರಕರಿಗೆ ಸೂಚಿಸಿದ್ದೇನೆ. ನಾನೂ, ಭೇಟಿ ನೀಡಿ ಮಾಹಿತಿ ಪಡೆಯುತ್ತೇನೆ’ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವರಹಿಪ್ಪರಗಿ (ವಿಜಯಪುರ): </strong>ಹಾಸ್ಟೆಲ್ ಅವ್ಯವಸ್ಥೆಯ ಬಗ್ಗೆ ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ ಪಟ್ಟಣದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಿರಿಯ ವಿದ್ಯಾರ್ಥಿಗಳನ್ನು, ಕೆಲ ಹಿರಿಯ ವಿದ್ಯಾರ್ಥಿಗಳು ಬುಧವಾರ ರಾತ್ರಿ ಥಳಿಸಿದ್ದಾರೆ.</p>.<p>ದೂರಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಹಾಸ್ಟೆಲ್ಗೆ ಭೇಟಿ ನೀಡಿ, ಅಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಸಿಬ್ಬಂದಿಗೆ ಎಚ್ಚರಿಕೆ ನೀಡಿ ಹೋಗಿದ್ದರು. ಇದಾದ ಬಳಿಕ 10ನೇ ತರಗತಿಯ ಕೆಲ ವಿದ್ಯಾರ್ಥಿಗಳು ದೂರು ನೀಡಿದ್ದ ಮೂವರು ಬಾಲಕರನ್ನು ಕೋಣೆಯಲ್ಲಿ ಕೂಡಿಹಾಕಿ ಥಳಿಸಿದ್ದಾರೆ. ಈ ಸಮಯದಲ್ಲಿ ಹಾಸ್ಟೆಲ್ ಮೇಲ್ವಿಚಾರಕ ಹಾಗೂ ಗುತ್ತಿಗೆ ಆಧಾರದ ಸಿಬ್ಬಂದಿ ವಸತಿ ನಿಲಯದಲ್ಲಿ ಇರಲಿಲ್ಲ ಎನ್ನಲಾಗಿದೆ.</p>.<p>ಈ ಬಗ್ಗೆ ಮೇಲ್ವಿಚಾರಕ ಅಜರುದ್ದೀನ್ ಮುಲ್ಲಾ ಅವರನ್ನು ಪ್ರಶ್ನಿಸಿದಾಗ, ‘ಇದು ಮಕ್ಕಳ ಜಗಳ. ಹಿರಿಯ ವಿದ್ಯಾರ್ಥಿಗಳು ನನ್ನ ಅಭಿಮಾನಿಗಳು. ಡಿ.ಸಿ.ಗೆ ಕಿರಿಯ ವಿದ್ಯಾರ್ಥಿಗಳು ದೂರು ನೀಡಿದ್ದರಿಂದ ಕೋಪಗೊಂಡ ಅವರು, ನನ್ನ ಮೇಲಿನ ಅಭಿಮಾನದಿಂದ ನಾಲ್ಕು ಏಟು ಹೊಡೆದಿರಬಹುದು. ಆ ಸಮಯದಲ್ಲಿ ನಾನು ವಸತಿ ನಿಲಯದಲ್ಲಿ ಇರಲಿಲ್ಲ. ಈ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ’ ಎಂದರು.</p>.<p>‘ಗುತ್ತಿಗೆ ಸಿಬ್ಬಂದಿ ಲಾಲಸಾಬ್ ಟಕ್ಕಳಕಿ ಅವರೇ ಹಿರಿಯ ವಿದ್ಯಾರ್ಥಿಗಳಿಗೆ ಹೇಳಿ, ನಮ್ಮನ್ನು ಚಾದರ್ನಲ್ಲಿ ಕಟ್ಟಿ, ಬಾಗಿಲು ಹಾಕಿ ಹೊಡೆಸಿದ್ದಾರೆ. ನಮ್ಮನ್ನು ಹೊಡೆದವರು ವಸತಿ ನಿಲಯದಲ್ಲಿ ಬೀಡಿ, ಸಿಗರೇಟ್ ಸೇದುತ್ತಾರೆ. ಶಾಲೆಗೂ ಸರಿಯಾಗಿ ಹೋಗುವುದಿಲ್ಲ. ಅವರಿಗೆ ವಾರ್ಡನ್ ಏನೂ ಹೇಳುವುದಿಲ್ಲ. ಈ ವಿಷಯವನ್ನು ನಾವು ಹೇಳಿದ್ದೇವೆ ಎಂದು ಗೊತ್ತಾದರೆ, ನಮ್ಮನ್ನು ಮತ್ತೆ ಹೊಡೆಯುತ್ತಾರೆ. ನಮಗೆ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು ಏಟು ತಿಂದ ಕಿರಿಯ ವಿದ್ಯಾರ್ಥಿಗಳು ‘ಪ್ರಜಾವಾಣಿ’ ಎದುರು ಅಳಲು ತೋಡಿಕೊಂಡರು.</p>.<p>‘ಈ ಬಗ್ಗೆ ವಿವರವಾದ ವರದಿ ನೀಡುವಂತೆ ಅಧಿಕಾರಿಗಳು ಹಾಗೂ ವಸತಿ ನಿಲಯದ ಮೇಲ್ವಿಚಾರಕರಿಗೆ ಸೂಚಿಸಿದ್ದೇನೆ. ನಾನೂ, ಭೇಟಿ ನೀಡಿ ಮಾಹಿತಿ ಪಡೆಯುತ್ತೇನೆ’ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>