<p><strong>ರಾಮನಗರ: </strong>ಜಿಲ್ಲಾ ಕೇಂದ್ರದಲ್ಲಿ ಈಗ ಅವರೆಕಾಯಿ ಮಾರಾಟ ಹೆಚ್ಚಾಗಿ ನಡೆಯುತ್ತಿದ್ದು, ಬೆಲೆಯೂ ಕುಸಿದಿದೆ.</p>.<p>ಬೆಂಗಳೂರು–ಮೈಸೂರು ರಸ್ತೆ ಪಕ್ಕದಲ್ಲಿ, ಎಪಿಎಂಸಿ ಮಾರುಕಟ್ಟೆ ಆಸುಪಾಸು, ಹಳೆ ಬಸ್ ನಿಲ್ದಾಣ ಮತ್ತು ಬಡಾವಣೆಗಳಲ್ಲಿ ತಳ್ಳುವ ಗಾಡಿಗಳ ಮೂಲಕ ಅವರೆಕಾಯಿ ಮಾರಾಟ ನಡೆಯುತ್ತಿದೆ.</p>.<p>ಸ್ಥಳೀಯವಾಗಿ ಅವರೆಕಾಯಿ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಇಲ್ಲಿಗೆ ಹುಣಸೂರು, ಕೊಳ್ಳೇಗಾಲ, ಮೈಸೂರು ಜಿಲ್ಲೆಯ ನಂಜನಗೂಡು, ಎಚ್.ಡಿ. ಕೋಟೆ, ಗುಂಡ್ಲುಪೇಟೆ ಭಾಗದಿಂದಲೇ ಹೆಚ್ಚಾಗಿ ಅವರೆಕಾಯಿ ಪೂರೈಕೆಯಾಗುತ್ತಿದೆ. ಒಂದು ಕೆ.ಜಿ ಅವರೆಕಾಯಿಯ ಬೆಲೆ ₹16 ರಿಂದ ₹20 ಇದೆ.</p>.<p>‘ಪ್ರಸ್ತುತ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಅವರೆ ಕಾಯಿ ಬರುತ್ತಿದ್ದು, ಸಂಜೆ ವೇಳೆಗೆ ಮಾರಾಟವಾಗದೆ ಉಳಿಯುತ್ತಿದೆ’ ಎನ್ನುತ್ತಾರೆ ತರಕಾರಿ ಮಾರಾಟಗಾರ ಎಸ್. ಶ್ರೀನಿವಾಸ್.</p>.<p>ಜಿಲ್ಲೆಯಲ್ಲಿ ಮಾಗಡಿ ತಾಲ್ಲೂಕಿನಿಂದ ಅವರೆಕಾಯಿ ಬರಲು ಇನ್ನು ಹದಿನೈದು ದಿನ ಬೇಕು. ಚಿತ್ರದುರ್ಗ, ಆಂಧ್ರಪ್ರದೇಶದಿಂದ ಅವರೆಕಾಯಿ ಹೆಚ್ಚಾಗಿ ಬರುತ್ತಿರುವುದರಿಂದ ಈ ಬಾರಿ ಅವರೆಕಾಯಿಗೆ ಉತ್ತಮ ಬೆಲೆ ಇಲ್ಲ ಎಂದು ತಿಳಿಸಿದರು.</p>.<p>ಅವರೆಕಾಯಿಯ ಬೆಲೆ ಕಳೆದ ವರ್ಷಗಳಿಗಿಂತ ಕಡಿಮೆ ಇದ್ದರೂ ಗ್ರಾಹಕರು ಖರೀದಿಸುತ್ತಿಲ್ಲ. ಜತೆಗೆ ತರಕಾರಿಗಳ ವ್ಯಾಪಾರವೂ ಈಚಿನ ದಿನಗಳಲ್ಲಿ ಸರಿಯಾಗಿ ನಡೆಯುತ್ತಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಜಿಲ್ಲಾ ಕೇಂದ್ರದಲ್ಲಿ ಈಗ ಅವರೆಕಾಯಿ ಮಾರಾಟ ಹೆಚ್ಚಾಗಿ ನಡೆಯುತ್ತಿದ್ದು, ಬೆಲೆಯೂ ಕುಸಿದಿದೆ.</p>.<p>ಬೆಂಗಳೂರು–ಮೈಸೂರು ರಸ್ತೆ ಪಕ್ಕದಲ್ಲಿ, ಎಪಿಎಂಸಿ ಮಾರುಕಟ್ಟೆ ಆಸುಪಾಸು, ಹಳೆ ಬಸ್ ನಿಲ್ದಾಣ ಮತ್ತು ಬಡಾವಣೆಗಳಲ್ಲಿ ತಳ್ಳುವ ಗಾಡಿಗಳ ಮೂಲಕ ಅವರೆಕಾಯಿ ಮಾರಾಟ ನಡೆಯುತ್ತಿದೆ.</p>.<p>ಸ್ಥಳೀಯವಾಗಿ ಅವರೆಕಾಯಿ ಹೆಚ್ಚಿನ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಇಲ್ಲಿಗೆ ಹುಣಸೂರು, ಕೊಳ್ಳೇಗಾಲ, ಮೈಸೂರು ಜಿಲ್ಲೆಯ ನಂಜನಗೂಡು, ಎಚ್.ಡಿ. ಕೋಟೆ, ಗುಂಡ್ಲುಪೇಟೆ ಭಾಗದಿಂದಲೇ ಹೆಚ್ಚಾಗಿ ಅವರೆಕಾಯಿ ಪೂರೈಕೆಯಾಗುತ್ತಿದೆ. ಒಂದು ಕೆ.ಜಿ ಅವರೆಕಾಯಿಯ ಬೆಲೆ ₹16 ರಿಂದ ₹20 ಇದೆ.</p>.<p>‘ಪ್ರಸ್ತುತ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಅವರೆ ಕಾಯಿ ಬರುತ್ತಿದ್ದು, ಸಂಜೆ ವೇಳೆಗೆ ಮಾರಾಟವಾಗದೆ ಉಳಿಯುತ್ತಿದೆ’ ಎನ್ನುತ್ತಾರೆ ತರಕಾರಿ ಮಾರಾಟಗಾರ ಎಸ್. ಶ್ರೀನಿವಾಸ್.</p>.<p>ಜಿಲ್ಲೆಯಲ್ಲಿ ಮಾಗಡಿ ತಾಲ್ಲೂಕಿನಿಂದ ಅವರೆಕಾಯಿ ಬರಲು ಇನ್ನು ಹದಿನೈದು ದಿನ ಬೇಕು. ಚಿತ್ರದುರ್ಗ, ಆಂಧ್ರಪ್ರದೇಶದಿಂದ ಅವರೆಕಾಯಿ ಹೆಚ್ಚಾಗಿ ಬರುತ್ತಿರುವುದರಿಂದ ಈ ಬಾರಿ ಅವರೆಕಾಯಿಗೆ ಉತ್ತಮ ಬೆಲೆ ಇಲ್ಲ ಎಂದು ತಿಳಿಸಿದರು.</p>.<p>ಅವರೆಕಾಯಿಯ ಬೆಲೆ ಕಳೆದ ವರ್ಷಗಳಿಗಿಂತ ಕಡಿಮೆ ಇದ್ದರೂ ಗ್ರಾಹಕರು ಖರೀದಿಸುತ್ತಿಲ್ಲ. ಜತೆಗೆ ತರಕಾರಿಗಳ ವ್ಯಾಪಾರವೂ ಈಚಿನ ದಿನಗಳಲ್ಲಿ ಸರಿಯಾಗಿ ನಡೆಯುತ್ತಿಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>