ಪರಸ್ಪರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಡಾ.ಸರ್ಫ್ರಾಜ್ ಚಂದ್ರಗುತ್ತಿ, 2004ರಲ್ಲಿ ಆರಂಭಗೊಂಡ ವೇದಿಕೆ ಪ್ರತಿವರ್ಷ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುತ್ತಿದೆ. ನಾಡಿನ ಹತ್ತು ಹಲವು ಸಾಹಿತಿ, ವಿದ್ವಾಂಸರನ್ನು ಇಲ್ಲಿಗೆ ಕರೆಸಿ ಉಪನ್ಯಾಸ ಆಯೋಜಿಸಿದೆ. ಈ ವರ್ಷದಿಂದ ಮೂರು ಸಾಧಕರಿಗೆ ಪ್ರಶಸ್ತಿ ನೀಡುವ ಕೆಲಸಕ್ಕೆ ವೇದಿಕೆ ಮುಂದಾಗಿದೆ ಎಂದರು.