<p><strong>ಸಾಗರ:</strong> ಕವಯಿತ್ರಿ ಡಾ.ಕೆ. ಷರೀಫಾ, ಲೇಖಕ ಬಾಬು ಶಿವಪೂಜಾರಿ, ಸಂಶೋಧಕ ಡಾ.ಬಿ.ಎಸ್. ತಲ್ವಾಡಿ ಅವರಿಗೆ ಇಲ್ಲಿನ ಪರಸ್ಪರ ಸಾಹಿತ್ಯ ವೇದಿಕೆ ನೀಡುವ ರಾಜ್ಯಮಟ್ಟದ ಪ್ರಶಸ್ತಿ ಘೋಷಿಸಲಾಗಿದೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪರಸ್ಪರ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ನಾ.ಡಿಸೋಜ, ಪ್ರಶಸ್ತಿಯು ತಲಾ ₹ 10 ಸಾವಿರ ನಗದನ್ನು ಒಳಗೊಂಡಿದೆ. ಜ. 12ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ವರದಶ್ರೀ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.</p>.<p>ಬಾಬು ಶಿವಪೂಜಾರಿ ಅವರಿಗೆ ಜಾನಪದ ವಿದ್ವಾಂಸ ಎನ್. ಹುಚ್ಚಪ್ಪ ಮಾಸ್ತರ್ ಪ್ರಶಸ್ತಿ, ಡಾ.ಕೆ.ಷರೀಫಾ ಅವರಿಗೆ ಶಿಶುನಾಳ ಷರೀಫಾ ಸಾಹೇಬ ಭಾವೈಕ್ಯ ಪ್ರಶಸ್ತಿ, ಡಾ.ಬಿ.ಎಸ್. ತಲ್ವಾಡಿ ಅವರಿಗೆ ರೆವರೆಂಡ್ ಕಿಟೆಲ್ ಸಾಹೇಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಪರಸ್ಪರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಡಾ.ಸರ್ಫ್ರಾಜ್ ಚಂದ್ರಗುತ್ತಿ, 2004ರಲ್ಲಿ ಆರಂಭಗೊಂಡ ವೇದಿಕೆ ಪ್ರತಿವರ್ಷ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುತ್ತಿದೆ. ನಾಡಿನ ಹತ್ತು ಹಲವು ಸಾಹಿತಿ, ವಿದ್ವಾಂಸರನ್ನು ಇಲ್ಲಿಗೆ ಕರೆಸಿ ಉಪನ್ಯಾಸ ಆಯೋಜಿಸಿದೆ. ಈ ವರ್ಷದಿಂದ ಮೂರು ಸಾಧಕರಿಗೆ ಪ್ರಶಸ್ತಿ ನೀಡುವ ಕೆಲಸಕ್ಕೆ ವೇದಿಕೆ ಮುಂದಾಗಿದೆ ಎಂದರು.</p>.<p>ಪರಸ್ಪರ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಡಾ.ಜಿ.ಎಸ್. ಭಟ್, ಎಸ್.ಎಂ. ಗಣಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ಕವಯಿತ್ರಿ ಡಾ.ಕೆ. ಷರೀಫಾ, ಲೇಖಕ ಬಾಬು ಶಿವಪೂಜಾರಿ, ಸಂಶೋಧಕ ಡಾ.ಬಿ.ಎಸ್. ತಲ್ವಾಡಿ ಅವರಿಗೆ ಇಲ್ಲಿನ ಪರಸ್ಪರ ಸಾಹಿತ್ಯ ವೇದಿಕೆ ನೀಡುವ ರಾಜ್ಯಮಟ್ಟದ ಪ್ರಶಸ್ತಿ ಘೋಷಿಸಲಾಗಿದೆ.</p>.<p>ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪರಸ್ಪರ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ನಾ.ಡಿಸೋಜ, ಪ್ರಶಸ್ತಿಯು ತಲಾ ₹ 10 ಸಾವಿರ ನಗದನ್ನು ಒಳಗೊಂಡಿದೆ. ಜ. 12ರಂದು ಬೆಳಿಗ್ಗೆ 10.30ಕ್ಕೆ ಇಲ್ಲಿನ ವರದಶ್ರೀ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.</p>.<p>ಬಾಬು ಶಿವಪೂಜಾರಿ ಅವರಿಗೆ ಜಾನಪದ ವಿದ್ವಾಂಸ ಎನ್. ಹುಚ್ಚಪ್ಪ ಮಾಸ್ತರ್ ಪ್ರಶಸ್ತಿ, ಡಾ.ಕೆ.ಷರೀಫಾ ಅವರಿಗೆ ಶಿಶುನಾಳ ಷರೀಫಾ ಸಾಹೇಬ ಭಾವೈಕ್ಯ ಪ್ರಶಸ್ತಿ, ಡಾ.ಬಿ.ಎಸ್. ತಲ್ವಾಡಿ ಅವರಿಗೆ ರೆವರೆಂಡ್ ಕಿಟೆಲ್ ಸಾಹೇಬ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.</p>.<p>ಪರಸ್ಪರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಡಾ.ಸರ್ಫ್ರಾಜ್ ಚಂದ್ರಗುತ್ತಿ, 2004ರಲ್ಲಿ ಆರಂಭಗೊಂಡ ವೇದಿಕೆ ಪ್ರತಿವರ್ಷ ಕನ್ನಡ ಭಾಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸುತ್ತಿದೆ. ನಾಡಿನ ಹತ್ತು ಹಲವು ಸಾಹಿತಿ, ವಿದ್ವಾಂಸರನ್ನು ಇಲ್ಲಿಗೆ ಕರೆಸಿ ಉಪನ್ಯಾಸ ಆಯೋಜಿಸಿದೆ. ಈ ವರ್ಷದಿಂದ ಮೂರು ಸಾಧಕರಿಗೆ ಪ್ರಶಸ್ತಿ ನೀಡುವ ಕೆಲಸಕ್ಕೆ ವೇದಿಕೆ ಮುಂದಾಗಿದೆ ಎಂದರು.</p>.<p>ಪರಸ್ಪರ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಡಾ.ಜಿ.ಎಸ್. ಭಟ್, ಎಸ್.ಎಂ. ಗಣಪತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>