ವಿಜಯಪುರ: ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ನೀಡುವ ಪ್ರತಿಷ್ಠಿತ ‘ಭಾಸ್ಕರ’ ಪ್ರಶಸ್ತಿಯನ್ನು ಈ ಬಾರಿ ಬಾಹ್ಯಾಕಾಶ ವಿಜ್ಞಾನಿ ಪ್ರೊ.ಕೆ.ಕಸ್ತೂರಿ ರಂಗನ್ ಅವರಿಗೆ ಸಿಂದಗಿ ಪಟ್ಟಣದಲ್ಲಿ ಬುಧವಾರ ಪ್ರದಾನ ಮಾಡಲಾಯಿತು.
ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಬೆಳ್ಳಿ ಸ್ಮರಣಿಕೆಯನ್ನು ಒಳಗೊಂಡಿದೆ. ಶ್ರೀಶೈಲ ಪೀಠದ ಡಾ.ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು, ಸಾರಂಗಮಠದ ಡಾ.ಪ್ರಭು ಸಾರಂಗದೇವರ ಶಿವಾಚಾರ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಇದಕ್ಕೂ ಮುನ್ನ ಕಸ್ತೂರಿರಂಗನ್ ಅವರು ಯುವ ವಿಜ್ಞಾನಿಗಳೊಂದಿಗೆ ಸಂವಾದ ನಡೆಸಿದರು. ಸಂವಾದದಲ್ಲಿ ಕೇಳಿ ಬಂದ ಪ್ರಶ್ನೆಗಳಿಗೆ ಉತ್ತರ ನೀಡಿದ ಅವರು, ವಿದ್ಯಾರ್ಥಿಗಳ ಕೌತುಕಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.