ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಯಂ ಹುದ್ದೆಗೆ ಅತಿಥಿ ಉಪನ್ಯಾಸಕರ ಪರಿಗಣಿಸಿ: ಆಯನೂರು ಆಗ್ರಹ

Last Updated 4 ನವೆಂಬರ್ 2019, 15:11 IST
ಅಕ್ಷರ ಗಾತ್ರ

ಶಿವಮೊಗ್ಗ: ರಾಜ್ಯಸರ್ಕಾರ1,247 ಪ್ರಾಚಾರ್ಯರು, ಸಹಾಯಕ ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಹುದ್ದೆಗಳಿಗೆಸರ್ಕಾರಿಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನೇನೇಮಕ ಮಾಡಿಕೊಳ್ಳಬೇಕು ಎಂದುವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಒತ್ತಾಯಿಸಿದರು.

ಹಿಂದಿನಸರ್ಕಾರಗಳುಅತಿಥಿ ಉಪನ್ಯಾಸಕರನ್ನುಕಾಯಂಮಾಡುವ ಭರವಸೆ ನೀಡಿದ್ದವು.ನೀಡಿದಭರವಸೆಯಂತೆ ನಡೆದುಕೊಳ್ಳಲಿಲ್ಲ.
ರಾಜ್ಯದ 412 ಪದವಿ ಕಾಲೇಜುಗಳಲ್ಲಿ ಶೇ 25ರಷ್ಟುಕಾಯಂ ಉಪನ್ಯಾಸಕರಿದ್ದಾರೆ.ಉಳಿದವರು ಅತಿಥಿ ಉಪನ್ಯಾಸಕರು. ಕನಿಷ್ಠ ವೇತನವೂಸಿಗದೆ ಅವರು ಮಾನಸಿಕವಾಗಿ ದುರ್ಬಲರಾಗುತ್ತಿದ್ದಾರೆ. ಹೊಸ ನೇಮಕಾತಿ ಮಾಡಿಕೊಳ್ಳುವಾಗ ಪ್ರತಿ ಬಾರಿಯೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ನ.10ರ ಒಳಗೆ ಹೊಸ ನೇಮಕಾತಿ ಮಾಡಿಕೊಳ್ಳಬೇಕು ಎಂದುಯುಜಿಸಿ ಗಡುವು ನೀಡಿದೆ. ರಾಜ್ಯ ಸರ್ಕಾರವೂ ಸಂಪುಟ ಸಭೆಯಲ್ಲಿ ಹೊಸ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಈ ಬಾರಿಯಾದರೂ ಅತಿಥಿ ಉಪನ್ಯಾಸಕರಿಗೆ ಅವಕಾಶ ನೀಡಬೇಕು.ಅವರ ಸೇವಾವಧಿ, ಹಿರಿತನ ಪರಿಗಣಿಸಿಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರು ಗೌರವದಿಂದ ಬದುಕಲು ಸೇವಾ ಭದ್ರತೆ ಒದಗಿಸಬೇಕು. ಕೆಲಸ ಕಾಯಂ ಮಾಡಬೇಕು. ಅಲ್ಲಿಯವರೆಗೂ ಯುಜಿಸಿ ನಿಯಮಾವಳಿ ಪ್ರಕಾರ ಮಾಸಿಕ ₨ 50 ಸಾವಿರ ವೇತನ ನೀಡಬೇಕು ಎಂದು ಆಗ್ರಹಿಸಿದರು.

‘ಅತಿಥಿ ಉಪನ್ಯಾಸಕರು ನ.5ರಂದುರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಮೂಲಕಸರ್ಕಾರಕ್ಕೆಮನವಿ ಸಲ್ಲಿಸುತ್ತಿದ್ದಾರೆ.ಸರ್ಕಾರತಕ್ಷಣಗಮನಹರಿಸಬೇಕು.ಅವರಿಗೆ ನ್ಯಾಯ ನೀಡಬೇಕು. ಕಾಯಂಗೊಳಿಸದಿದ್ದರೆ ಹೋರಾಟ ರೂಪಿಸಲಾಗುವುದು.ಹೋರಾಟದನೇತೃತ್ವನಾನೆ ವಹಿಸುವೆ.ಸರ್ಕಾರ ಅದಕ್ಕೆ ಅವಕಾಶ ನೀಡಬಾರದು’ ಎಂದು ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎನ್.ಜೆ.ರಾಜಶೇಖರ್, ಕೆ.ಜಿ.ಕುಮಾರಸ್ವಾಮಿ, ಎಚ್.ಸಿ.ಬಸವರಾಜಪ್ಪ, ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಅಧ್ಯಕ್ಷ ಡಾ.ಎಚ್.ಸೋಮಶೇಖರ್ ಶಿಮೊಗ್ಗೆ, ಡಾ.ಎಂ.ಸಿ.ನರಹರಿ, ಅರುಣ್ ಕುಮಾರ್, ರಾಜೇಶ್ ಕುಮಾರ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT