ಆರೋಗ್ಯ ಸಿಬ್ಬಂದಿಗೆ, ಆಶಾ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ಇಲ್ಲ. ಕನಿಷ್ಠ ವೇತನವೂ ಇಲ್ಲ. ರಜೆಗಳೂ ಇಲ್ಲ. ಕಿರುಕುಳವೂ ತಪ್ಪಿಲ್ಲ. ಕೇಂದ್ರದಿಂದ ಹಣ ಬಂದರೂ ರಾಜ್ಯದ ಆರ್ಥಿಕ ಇಲಾಖೆ ಹಣ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ 46 ಸಾವಿರ ಆಶಾ ಕಾರ್ಯಕರ್ತೆಯರಿದ್ದಾರೆ. ಅವರು ತೀವ್ರ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಅವರ ಕಷ್ಟಗಳನ್ನೇ ಮರೆತುಬಿಟ್ಟಿದೆ. ಸದ್ಯಕ್ಕೆ ಸರ್ಕಾರ ಇವರ ರಕ್ಷಣೆಗೆ ನಿಲ್ಲಬೇಕು. ಸರ್ಕಾರ ತಕ್ಷಣ ಈ ಕೆಲಸ ಮಾಡದಿದ್ದರೆ ಸರ್ಕಾರದ ವಿರುದ್ಧ ದನಿ ಎತ್ತಲು ಸಿದ್ಧಎಂದು ಎಚ್ಚರಿಸಿದರು.