ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ಕುಟುಂಬಕ್ಕೆ ಎಲ್ಲ ಸವಲತ್ತು: ಕಡಿವಾಣಕ್ಕೆ ಕ್ರಮ

ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಕುಮಾರ ಬಂಗಾರಪ್ಪ ಸೂಚನೆ
Last Updated 29 ಜನವರಿ 2020, 14:25 IST
ಅಕ್ಷರ ಗಾತ್ರ

ಶಿವಮೊಗ್ಗ:ವಿವಿಧ ಇಲಾಖೆಗಳಲ್ಲಿ ಸರ್ಕಾರದ ಸವಲತ್ತುಗಳನ್ನು ಪಡೆಯುತ್ತಿರುವ ಕುಟುಂಬಗಳ ವಂಶಾವಳಿ ಸಿದ್ಧಪಡಿಸಬೇಕು. ಒಂದೇ ಕುಟುಂಬಕ್ಕೆ ಸರ್ಕಾರದ ಎಲ್ಲಾ ಸೌಲಭ್ಯಗಳು ನಿರಂತರವಾಗಿ ಸಿಗುವುದಕ್ಕೆಕಡಿವಾಣಗಾಕಬೇಕುವಿಧಾನ ಮಂಡಲದ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ಅಧ್ಯಕ್ಷ ಕುಮಾರ ಬಂಗಾರಪ್ಪ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಮಿತಿಯ ಪರಿಶೀಲನಾ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ವಸತಿಶಾಲೆಗಳನ್ನು ಆರಂಭಿಸುವಕುರಿತು,ಸೀಟುಗಳನ್ನು ಹೆಚ್ಚಿಸುವ ಕುರಿತು ವಿಸ್ತೃತ ಯೋಜನೆ ಸಿದ್ಧಪಡಿಸಬೇಕು.ಪ್ರಸ್ತಾವ ಸಲ್ಲಿಸಬೇಕು. ಹಾಸ್ಟೆಲ್‍ಗಳ ಆವಶ್ಯಕತೆ, ಮೂಲಸೌಕರ್ಯ ಮತ್ತಿತರ ಮಾಹಿತಿಗಳುಒಳಗೊಂಡಿರಬೇಕು ಎಂದು ಸಲಹೆ ನೀಡಿದರು.

ಸಮಿತಿ ಈಗಾಗಲೇ ಹಲವು ಜಿಲ್ಲೆಗಳಿಗೆ ಭೇಟಿ ನೀಡಿದೆ. ವಿವಿಧ ಇಲಾಖೆಗಳ ಅಧಿಕಾರಿಗಳ ಜತೆಸಭೆ ನಡೆಸಿದೆ. ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸಲು ಸೂಚಿಸಲಾಗಿದೆ. ಕೆಲವು ವಿಷಯಗಳ ಬಗ್ಗೆ 15ದಿನಗಳ ಒಳಗೆ ಸಮಗ್ರ ಮಾಹಿತಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ.ಸಮಿತಿಯ ಶಿಫಾರಸುಗಳನ್ನುಮುಂದಿನ ಅಧಿವೇಶನದ ವೇಳೆ ಸರ್ಕಾರಕ್ಕೆ ಸಲ್ಲಿಸಲಿದೆ ಎಂದರು.

ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮಗಳಅನ್ವಯ ಎಲ್ಲಾ ಇಲಾಖೆಗಳಲ್ಲಿ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳಿವೆ. ಈ ಎಲ್ಲಾ ಕಾರ್ಯಕ್ರಮಗಳನ್ನೂ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಹಾಸ್ಟೆಲ್‍ಗಳ ಸ್ಥಿತಿಗತಿ ಸರ್ಕಾರದ ಗಮನಕ್ಕೆ ತರಬೇಕು. ಹಾಸ್ಟೆಲ್‍ಗಳ ಮಂಜೂರಾತಿಗೆ ಮುನ್ನ ಜಮೀನು ಕಾಯ್ದಿರಿಸಬೇಕು. ಬಾಡಿಗೆಗೆ ಹಾಸ್ಟೆಲ್‍ಗಳನ್ನು ತೆಗೆದುಕೊಳ್ಳುವ ಮೊದಲು ಎಲ್ಲಾ ದಾಖಲೆಗಳು ಸಮರ್ಪಕವಾಗಿದೆಯೇ ಎಂದು ಪರಿಶೀಲಿಸಬೇಕು ಎಂದುತಾಕೀತು ಮಾಡಿದರು.

ಗಂಗಾ ಕಲ್ಯಾಣ ವಿಳಂಬ:ಗಂಗಾ ಕಲ್ಯಾಣ ಯೋಜನೆ ವಿಳಂಬವಾಗುತ್ತಿದೆ. ಕಾಮಗಾರಿಯಲ್ಲಿ ಜಿಪಿಎಸ್ ಅಳವಡಿಸಬೇಕು.ಫಲಾನುಭವಿಯ ಖಾತೆಗೆ ನೇರವಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ವಿದ್ಯಾರ್ಥಿನಿಲಯಗಳಲ್ಲಿ ವಿಶೇಷ ತರಗತಿಗಳನ್ನು ಆಯೋಜಿಸಬೇಕು. ಮದರಸಾಗಳಲ್ಲಿ ಇತರ ವಿಷಯಗಳ ಕಲಿಕೆಗೆಗೂ ಒತ್ತು ನೀಡಬೇಕು. ಡಿಡಿಪಿಐ ಮುತುವರ್ಜಿ ವಹಿಸಬೇಕು. ಜಿಲ್ಲೆಯಲ್ಲಿ ಇರುವ 770 ವಕ್ಫ್ ಆಸ್ತಿಗಳಲ್ಲಿ606 ಆಸ್ತಿಗಳ ಖಾತೆಯಾಗಿವೆ. ಇದರಿಂದ ಬರುವ ಆದಾಯ, ವಹಿವಾಟುಗಳನ್ನು ಜಿಲ್ಲಾಧಿಕಾರಿ ಅವರು ಪರಿಶೀಲಿಸಬೇಕು ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ,ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಕೆ.ಬಿ.ಶಾಂತಕುಮಾರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT