ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೂಡಲಸಂಗಮ: ಸಂಗಮನಾಥ, ಬಸವಣ್ಣನಿಗೆ ನಮನ

Last Updated 4 ನವೆಂಬರ್ 2022, 8:18 IST
ಅಕ್ಷರ ಗಾತ್ರ

ಬಾಗಲಕೋಟೆ: ಬೆಂಗಳೂರಿನಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣದ ಹಿನ್ನೆಲೆಯಲ್ಲಿ ಶುಕ್ರವಾರ ನಾಲ್ವರು ಸಚಿವರು ಕೂಡಲಸಂಗಮದಲ್ಲಿನ ಪವಿತ್ರ ಮಣ್ಣು ತೆಗೆದುಕೊಂಡು ಹೋದರು.

ಕೂಡಲಸಂಗಮದ ಸಂಗಮನಾಥ ಹಾಗೂ ಬಸವಣ್ಣನ ಐಕ್ಯ ಸ್ಥಳಕ್ಕೆ ತೆರಳಿದ ಸಚಿವರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಡಾ.ಸಿ.ಎನ್. ಅಶ್ವತ್ಥನಾರಾಯಣ, ನಾರಾಯಣಗೌಡ ನಮನ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವಣ್ಣನವರ ಜಾತ್ಯತೀತ, ಕಾಯಕ, ಸಾಮಾಜಿಕ ನ್ಯಾಯ, ಸಮಾಜ ಸಮಗ್ರ ಸುಧಾರಣೆಯ ತತ್ವಗಳು ಸದಾಕಾಲ ಅನ್ವಯವಾಗುತ್ತವೆ ಎಂದರು.

ಬೆಂಗಳೂರು ನಿರ್ಮಾಣ ಮಾಡಿದ ನಾಡಪ್ರಭು ಕೆಂಪೇಗೌಡರ ಮೂರ್ತಿ ಅನಾವರಣ ಸಂದರ್ಭ ದಲ್ಲಿ ನಾಡನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಇಲ್ಲಿ‌ನ ಪವಿತ್ರ ಮಣ್ಣನ್ನು ತೆಗೆದುಕೊಂಡು ಹೋಗಲಾಗುತ್ತದೆ ಎಂದರು.

ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಕ್ಕೆ ಕೆಂಪೇಗೌಡರ ಹೆಸರಿಡಲಾಗಿದೆ. ಅಲ್ಲಿ ಪ್ರತಿಮೆ ಸ್ಥಾಪಿಸಿವ ಮೂಲಕ ಅವರ‌ ದರ್ಶನ ಮಾಡಿಸಲಾಗುತ್ತಿದೆಎಂದುಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT