<p><strong>ಸಾವಳಗಿ (ಬಾಗಲಕೋಟೆ ಜಿಲ್ಲೆ):</strong> ಗ್ರಾಮದ ಬ್ಯಾಡಗಿ ವಸ್ತಿ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಕುಕ್ಕರ್ ಸ್ಫೋಟಗೊಂಡು ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು ಅವರನ್ನು ಜಮಖಂಡಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಸಮರ್ಥ ಹಣಮಂತ ಅಟ್ಯಾಳ (4) ಹಾಗೂ ಅದ್ವಿಕ್ ಹಣಮಂತ ಅಟ್ಯಾಳ (3) ಗಾಯಗೊಂಡ ಮಕ್ಕಳು. ಈ ಘಟನೆಯಲ್ಲಿ ಒಂದು ಮಗುವಿನ ಕಿವಿಗೆ ಹಾಗೂ ಇನ್ನೊಂದು ಮಗುವಿನ ತಲೆಗೆ ಹೆಚ್ಚು ಗಾಯಗಳಾಗಿವೆ.</p>.<p>‘ಅಂಗನವಾಡಿ ಕೇಂದ್ರದಲ್ಲಿದ್ದವರ ನಿರ್ಲಕ್ಷ್ಯದಿಂದ ಕುಕ್ಕರ್ ಸ್ಫೋಟಗೊಂಡಿದೆ. ಇಷ್ಟೆಲ್ಲ ಆಗಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಪೋಷಕ ಹಣಮಂತ ಅಟ್ಯಾಳ ಒತ್ತಾಯಿಸಿದರು.</p>.<p>‘ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದೆ ಅಷ್ಟೆ. ಅಂಗನವಾಡಿ ಸಹಾಯಕಿ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಕ್ಕಳಿಗೆ ಕುಕ್ಕರ್ ಬಡಿದಿಲ್ಲ; ಮಕ್ಕಳು ಗಾಬರಿಗೊಂಡು ಗೋಡೆಗೆ ಡಿಕ್ಕಿ ಹೊಡೆದು ಗಾಯಗಳಾಗಿರಬಹುದು’ ಎಂದು ಜಮಖಂಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅನುರಾಧಾ ಹಾದಿಮನಿ ’ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾವಳಗಿ (ಬಾಗಲಕೋಟೆ ಜಿಲ್ಲೆ):</strong> ಗ್ರಾಮದ ಬ್ಯಾಡಗಿ ವಸ್ತಿ ಅಂಗನವಾಡಿ ಕೇಂದ್ರದಲ್ಲಿ ಬುಧವಾರ ಕುಕ್ಕರ್ ಸ್ಫೋಟಗೊಂಡು ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು ಅವರನ್ನು ಜಮಖಂಡಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. </p>.<p>ಸಮರ್ಥ ಹಣಮಂತ ಅಟ್ಯಾಳ (4) ಹಾಗೂ ಅದ್ವಿಕ್ ಹಣಮಂತ ಅಟ್ಯಾಳ (3) ಗಾಯಗೊಂಡ ಮಕ್ಕಳು. ಈ ಘಟನೆಯಲ್ಲಿ ಒಂದು ಮಗುವಿನ ಕಿವಿಗೆ ಹಾಗೂ ಇನ್ನೊಂದು ಮಗುವಿನ ತಲೆಗೆ ಹೆಚ್ಚು ಗಾಯಗಳಾಗಿವೆ.</p>.<p>‘ಅಂಗನವಾಡಿ ಕೇಂದ್ರದಲ್ಲಿದ್ದವರ ನಿರ್ಲಕ್ಷ್ಯದಿಂದ ಕುಕ್ಕರ್ ಸ್ಫೋಟಗೊಂಡಿದೆ. ಇಷ್ಟೆಲ್ಲ ಆಗಿದ್ದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ತಪ್ಪಿತಸ್ಥರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಪೋಷಕ ಹಣಮಂತ ಅಟ್ಯಾಳ ಒತ್ತಾಯಿಸಿದರು.</p>.<p>‘ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದೆ ಅಷ್ಟೆ. ಅಂಗನವಾಡಿ ಸಹಾಯಕಿ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಕ್ಕಳಿಗೆ ಕುಕ್ಕರ್ ಬಡಿದಿಲ್ಲ; ಮಕ್ಕಳು ಗಾಬರಿಗೊಂಡು ಗೋಡೆಗೆ ಡಿಕ್ಕಿ ಹೊಡೆದು ಗಾಯಗಳಾಗಿರಬಹುದು’ ಎಂದು ಜಮಖಂಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಅನುರಾಧಾ ಹಾದಿಮನಿ ’ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>