<p><strong>ಬಾಗಲಕೋಟೆ</strong>: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಹಂಚಿಕೆ ಮಾಡಿದ ಭೂಮಿಯನ್ನು ಕೈಗಾರಿಕೆಳಿಗೆ ಬಳಸಿಕೊಳ್ಳಲಾಗಿದೆಯೇ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2008 ರಿಂದ ರಾಜ್ಯದಲ್ಲಿ ಕೈಗಾರಿಕೆಗಾಗಿ ಲ್ಯಾಂಡ್ ಬ್ಯಾಂಕ್ ಆರಂಭಿಸಲಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಕೈಗಾರಿಕೆಗೆ ಹಂಚಿದ ಭೂಮಿ ಯಾವುದಕ್ಕೆ ಬಳಕೆಯಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಅಗ್ರಹಿಸಿದರು.</p>.<p>ಭೂಮಿ ಪಡೆದ 5 ವರ್ಷಗಳಲ್ಲಿ ಕೈಗಾರಿಕೆ ಸ್ಥಾಪಿಸದಿದ್ದರೆ ಭೂಮಿ ವಾಪಸ್ ಪಡೆಯಬೇಕು ಎಂದಿದೆ. ಎಷ್ಟು ವಾಪಸ್ ಪಡೆಯಲಾಗಿದೆ ಎಂದು ಪ್ರಶ್ನಿಸಿದರು.</p>.<p>ನಾಲ್ಕು ತಿಂಗಳ ಹಿಂದೆ ಬಾದಾಮಿ ತಾಲ್ಲೂಕಿನ ಹಲಕುರ್ಕಿಯಲ್ಲಿ ಕಾಲುವೆ ನಿರ್ಮಾಣಕ್ಕೆ ನೋಟಿಸ್ ನೀಡಿದ ಭೂಮಿಯನ್ನು ಈಗ ಕೈಗಾರಿಕೆಗೆ ವಶ ಪಡಿಸಿಕೊಳ್ಳಲು ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮುಂದಾಗಿದ್ದಾರೆ. ಇವರಿಗೆ ಹೇಳುವವರು, ಕೇಳುವವರು ಯಾರು ಇಲ್ಲವೇ ಎಂದು ಪ್ರಶ್ನಿಸಿದರು.</p>.<p>ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ಗೆ ಆಗ್ರಹಿಸಿ ನವೆಂಬರ್ ನಲ್ಲಿ ಬಸವ ಕಲ್ಯಾಣದಿಂದ ಬೆಂಗಳೂರುವರೆಗೆ ಪರಿವರ್ತನಾ ಯಾತ್ರೆ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಹಂಚಿಕೆ ಮಾಡಿದ ಭೂಮಿಯನ್ನು ಕೈಗಾರಿಕೆಳಿಗೆ ಬಳಸಿಕೊಳ್ಳಲಾಗಿದೆಯೇ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಗ್ರಹಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2008 ರಿಂದ ರಾಜ್ಯದಲ್ಲಿ ಕೈಗಾರಿಕೆಗಾಗಿ ಲ್ಯಾಂಡ್ ಬ್ಯಾಂಕ್ ಆರಂಭಿಸಲಾಗಿದೆ. ಅಲ್ಲಿಂದ ಇಲ್ಲಿಯವರೆಗೆ ಕೈಗಾರಿಕೆಗೆ ಹಂಚಿದ ಭೂಮಿ ಯಾವುದಕ್ಕೆ ಬಳಕೆಯಾಗಿದೆ ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಅಗ್ರಹಿಸಿದರು.</p>.<p>ಭೂಮಿ ಪಡೆದ 5 ವರ್ಷಗಳಲ್ಲಿ ಕೈಗಾರಿಕೆ ಸ್ಥಾಪಿಸದಿದ್ದರೆ ಭೂಮಿ ವಾಪಸ್ ಪಡೆಯಬೇಕು ಎಂದಿದೆ. ಎಷ್ಟು ವಾಪಸ್ ಪಡೆಯಲಾಗಿದೆ ಎಂದು ಪ್ರಶ್ನಿಸಿದರು.</p>.<p>ನಾಲ್ಕು ತಿಂಗಳ ಹಿಂದೆ ಬಾದಾಮಿ ತಾಲ್ಲೂಕಿನ ಹಲಕುರ್ಕಿಯಲ್ಲಿ ಕಾಲುವೆ ನಿರ್ಮಾಣಕ್ಕೆ ನೋಟಿಸ್ ನೀಡಿದ ಭೂಮಿಯನ್ನು ಈಗ ಕೈಗಾರಿಕೆಗೆ ವಶ ಪಡಿಸಿಕೊಳ್ಳಲು ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮುಂದಾಗಿದ್ದಾರೆ. ಇವರಿಗೆ ಹೇಳುವವರು, ಕೇಳುವವರು ಯಾರು ಇಲ್ಲವೇ ಎಂದು ಪ್ರಶ್ನಿಸಿದರು.</p>.<p>ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್ಗೆ ಆಗ್ರಹಿಸಿ ನವೆಂಬರ್ ನಲ್ಲಿ ಬಸವ ಕಲ್ಯಾಣದಿಂದ ಬೆಂಗಳೂರುವರೆಗೆ ಪರಿವರ್ತನಾ ಯಾತ್ರೆ ಮಾಡಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>