ಹಟಗಾರ ಸಮಾಜದ ಮೊದಲ ಪೀಠಾಧ್ಯಕ್ಷರ ಪೀಠಾರೋಹಣ ಫೆ.3ಕ್ಕೆ

ಬಾಗಲಕೋಟೆ: ಜಿಲ್ಲೆಯ ಬನಹಟ್ಟಿಯಲ್ಲಿಫೆ.3 ರಂದು ಹಟಗಾರ ಸಮಾಜದ (ನೇಕಾರ) ವತಿಯಿಂದ ಸಮಾಜದ ಮೊದಲ ಪೀಠಾಧ್ಯಕ್ಷ ಚಿಕ್ಕರೇವಣಸಿದ್ಧ ಶಿವಶರಣರ ಪೀಠಾರೋಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾಜದ ಮುಖಂಡ ರಾಜಶೇಖರ ಸೊರಗಾಂವಿ, ‘ಫೆ.1 ರಿಂದಲೇ ಕಾರ್ಯಕ್ರಮಗಳು ಆರಂಭ ವಾಗಲಿದ್ದು, ನೂತನ ಪೀಠಾಧ್ಯಕ್ಷರ ಪುರ ಪ್ರವೇಶ ನಡೆಯ ಲಿದೆ. ಇಂಚಲದ ಶಿವಾನಂದ ಭಾರತಿ ಸ್ವಾಮೀಜಿ, ರಬಕವಿ
ಯ ಗುರುಸಿದ್ಧೇಶ್ವರ ಸ್ವಾಮೀಜಿ, ಬನಹಟ್ಟಿಯ ಶರಣ ಬಸವ ಸ್ವಾಮೀಜಿ, ಆಳಂದದ ಚನ್ನಬಸವ ಪಟ್ಟದೇವರು ಸಾನ್ನಿಧ್ಯ ವಹಿಸಲಿದ್ದಾರೆ. ಪ್ರತಿದಿನ ಸಂಜೆ ಧಾರ್ಮಿಕ ಕಾರ್ಯಕ್ರಮಗಳು, ವಚನ– ಚಿಂತನಾ ಗೋಷ್ಠಿ, ಸಾಧಕರಿಗೆ ಸನ್ಮಾನ ನಡೆಯಲಿವೆ’ ಎಂದರು.
ಫೆ.3 ರಂದು ಬೆಳಿಗ್ಗೆ ದೇವರದಾಸಿ ಮಯ್ಯ ದೇವಸ್ಥಾನದ ಗೋಪುರ ಕಟ್ಟಡ ಪೂಜೆ, ವಿಶ್ರಾಂತಿಧಾಮದ ಶಂಕು ಸ್ಥಾಪನೆ ನಡೆಯಲಿದೆ. ಮಧ್ಯಾಹ್ನ 3ಕ್ಕೆ ಎಸ್.ಆರ್.ಎ. ಮೈದಾನದಲ್ಲಿ ಪೀಠಾ ರೋಹಣ ನಡೆಯಲಿದ್ದು, ಮಹಾಲಿಂಗ ಪುರದ ಸಹಜಾನಂದ ಸ್ವಾಮೀಜಿ, ಕಲಬುರಗಿಯ ಲಕ್ಷ್ಮಿದೇವಿ ಅಮ್ಮ, ನೀರಲಕೇರಿಯ ಘನಲಿಂಗ ಸ್ವಾಮೀಜಿ, ಮುದನೂರ ಈಶ್ವರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.