ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಿಯಕರನ ಜತೆ ಮಗಳ ಕೊಲೆ | ಮರ್ಯಾದೆಗೇಡು ಹತ್ಯೆ ಶಂಕೆ

ಮದುವೆ ಮಾಡುವುದಾಗಿ ಕರೆಸಿ ಕೃತ್ಯ: ಬಾಲಕಿಯ ತಂದೆ, ಸಂಬಂಧಿಕರ ವಿರುದ್ಧ ಪ್ರಕರಣ
Last Updated 18 ಅಕ್ಟೋಬರ್ 2022, 20:53 IST
ಅಕ್ಷರ ಗಾತ್ರ

ಬಾಗಲಕೋಟೆ: ಅನ್ಯಜಾತಿಯ ಯುವಕನನ್ನು ಪ್ರೀತಿಸಿದ್ದಳೆಂಬ ಕಾರಣಕ್ಕೆ ಮಗಳು ಹಾಗೂ ಆಕೆಯ ಪ್ರಿಯಕರನನ್ನು ತಂದೆ ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಬೇವಿನಮಟ್ಟಿಯಲ್ಲಿ ನಡೆದಿದೆ. ಹತ್ಯೆ ಬಳಿಕ ಮೃತದೇಹಗಳನ್ನು ಕೃಷ್ಣಾ ನದಿಗೆ ಎಸೆಯಲಾಗಿದ್ದು, ಮೃತದೇಹಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಹತ್ಯೆಗೆ ಸಂಬಂಧಪಟ್ಟಂತೆ ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಎನ್ನಲಾದ ರವಿ ಹುಲ್ಲನ್ನವರ, ಹನಮಂತ ಮಲ್ಲಾಡದ ಹಾಗೂ ಬೀರಪ್ಪ ದಳವಾಯಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಎನ್ನಲಾದ ಬಾಲಕಿಯ ತಂದೆ ಪರಸಪ್ಪ ಕರಡಿ ಸೇರಿದಂತೆ ನಾಲ್ವರು ತಲೆಮರೆಸಿಕೊಂಡಿದ್ದಾರೆ. ಕುರುಬ ಸಮಾಜದ 17 ವರ್ಷದ ಬಾಲಕಿ ರಾಜೇಶ್ವರಿ (ಹೆಸರು ಬದಲಾಯಿಸಲಾಗಿದೆ) ಹಾಗೂ ವಾಲ್ಮೀಕಿ ಸಮಾಜದ ವಿಶ್ವನಾಥ ನೆಲಗಿ ಇಬ್ಬರೂ ಪ್ರೀತಿಸುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT