ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಮರ್ಯಾದೆಗೇಡು ಹತ್ಯೆ, ಯುವತಿಯ ತಂದೆ ಬಂಧನ

Last Updated 18 ಡಿಸೆಂಬರ್ 2022, 6:17 IST
ಅಕ್ಷರ ಗಾತ್ರ

ಬಾಗಲಕೋಟೆ: ಮಗಳನ್ನುಪ್ರೀತಿಸಿ ಮದುವೆಯಾದ ಎಂಬ ಸಿಟ್ಟಿನಿಂದ ಮಗಳನ್ನು ಮದುವೆಯಾದ ಯುವಕನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿಕೊಂಡು ಶನಿವಾರ ತಡರಾತ್ರಿ ಜಮಖಂಡಿ ತಾಲ್ಲೂಕಿನ ಟಕ್ಕೋಡದಲ್ಲಿ ಕೊಲೆ ಮಾಡಿದ್ದಾರೆ.

ಜೈನ ಸಮುದಾಯಕ್ಕೆ ಸೇರಿದ ಭುಜಬಲಿ ಕರ್ಜಗಿ (34) ಕೊಲೆಯಾದ ಯುವಕ.

ಕ್ಷತ್ರಿಯ ಸಮಾಜದ ತಮ್ಮನಗೌಡ ಪಾಟೀಲ ಪುತ್ರಿ ಭಾಗ್ಯಶ್ರೀ ಅನ್ನು ಭುಜಬಲಿ ಕರ್ಜಗಿ ಪ್ರೀತಿಸಿ ಕೆಲ ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದರು.

ಶನಿವಾರ ರಾತ್ರಿ ಹನುಮಾನ ದೇವರ ಪಲ್ಲಕ್ಕಿ ಉತ್ಸವ ಮುಗಿಸಿ ಸಹೋದರನ ಪುತ್ರ ಸುಮೇದ್ ನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗಲು ಮುಂದಾದಾಗ ಕಾರದ ಪುಡಿ ಎರಚಲಾಗಿದೆ.

ಆಗ ಸುಮೇದ್ ಓಡಿ ಹೋಗಿದ್ದು, ಭುಜಬಲಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸಾವಳಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ತಮ್ಮನಗೌಡ ಪಾಟೀಲ ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಇನ್‌ಸ್ಪೆಕ್ಟರ್ ಮನೋಹರ ಕಂಚಗಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT