ಇಳಕಲ್ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕಪ್ಪು ಬಟ್ಟೆ ಪ್ರದರ್ಶಿಸಲು ಮುಂದಾದ ಯುವ ಕಾಂಗ್ರೆಸ್ ಹಾಗೂ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಇಲ್ಲಿನ ಕಂಠಿ ವೃತ್ತದಲ್ಲಿ ಕಾಂಗ್ರೆಸ್ ನಗರಸಭೆ ಸದಸ್ಯರಾದ ಅಮೃತ ಬಿಜ್ಜಲ್, ಮೌಲೇಶ ಬಂಡಿವಡ್ಡರ್, ಸುರೇಶ ಜಂಗ್ಲಿ ಯಾಸೀನ್ ಅಲ್ತಾಫ್, ವಾಸೀಂ ಜಾಹಗೀರದಾರ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.
ಪ್ರತಿಭಟನಾಕಾರರು ಕೋಮುದ್ವೇಷ ಹರಡುವ ಭಾಷಣ ಮಾಡುವ ಕಟೀಲ್ ನಗರ ಪ್ರವೇಶಬಾರದು. ಶೇ40ರಷ್ಟು ಕಮಿಷನ್ ಪಡೆಯುವ ಭ್ರಷ್ಟ ಜನವಿರೋಧಿ ಸರ್ಕಾರಕ್ಕೆ ಧಿಕ್ಕಾರ ಎಂದು ಕೂಗಿದರು.
ಕಾಂಗ್ರೆಸ್ ಕಾರ್ಯಕರ್ತರು ಕಂಠಿ ವೃತ್ತದಲ್ಲಿ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಕಟೀಲ್ ಶಾಸಕ ದೊಡ್ಡನಗೌಡ ಪಾಟೀಲ ನಿವಾಸಲ್ಲಿದ್ದರು.