ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ!

Last Updated 28 ಆಗಸ್ಟ್ 2021, 17:28 IST
ಅಕ್ಷರ ಗಾತ್ರ

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಮಧುರಖಂಡಿ ಗ್ರಾಮದಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಒಂದೇ ಕುಟುಂಬದ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಮಧುರಖಂಡಿಯ ಮುದರಡ್ಡಿ ಕುಟುಂಬದ ಸಹೋದರರಾದಹಣಮಂತ ಮುದರಡ್ಡಿ (45), ಬಸವರಾಜ ಮುದರಡ್ಡಿ(37), ಈಶ್ವರ ಮುದರಡ್ಡಿ (35) ಹಾಗೂ ಮಲ್ಲು ಮುದರಡ್ಡಿ (33) ಕೊಲೆಯಾದವರು.

ರಾತ್ರಿ ಗ್ರಾಮದ ಸಮೀಪದ ಸಣ್ಣೇರಿ ರಸ್ತೆಯ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ.

ಮಧುರಖಂಡಿಯ ಮುದರಡ್ಡಿ ಹಾಗೂ ಪುಟಾಣಿ ಕುಟುಂಬದವರ ನಡುವೆ ಜಮೀನಿನ ವ್ಯಾಜ್ಯದ ಕಾರಣ ಹಲವಾರು ವರ್ಷಗಳಿಂದ ಜಗಳ ನಡೆಯುತ್ತಿತ್ತು. ಈ ಹಿಂದೆಯೂ ಹಲವಾರು ಬಾರಿ ಹೊಡೆದಾಟ ನಡೆದಿತ್ತು ಎನ್ನಲಾಗಿದೆ. ಈಗ ಹೊರಗಿನವರನ್ನು ಕರೆಸಿ ಕೊಲೆ ಮಾಡಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT