ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯದ ಅಂಗಡಿ ಪ್ರಾರಂಭಕ್ಕೆ ವಿರೋಧ

,
Last Updated 15 ಅಕ್ಟೋಬರ್ 2018, 15:48 IST
ಅಕ್ಷರ ಗಾತ್ರ

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಕೆರೂರ ಪಟ್ಟಣದಲ್ಲಿ ಪ್ರಾರಂಭಿಸಲಾಗುತ್ತಿರುವ ಸರ್ಕಾರಿ ಮದ್ಯ ಮಾರಾಟ ಕೇಂದ್ರಕ್ಕೆ ವಿರೋಧಿಸಿ ಪಟ್ಟಣದ ವಿವಿಧ ಮಹಿಳಾ ಸಂಘಟನೆಗಳು ಸೋಮವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

ಇಲ್ಲಿನ ಜಿಲ್ಲಾಡಳಿತ ಭವನಕ್ಕೆ ಪ್ರತಿಭಟನಾ ರ್‍ಯಾಲಿ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಅಬಕಾರಿ ಇಲಾಖೆಯಿಂದ ಪ್ರಾರಂಭಿಸಲಾಗುತ್ತಿರುವ ಮದ್ಯ ಮಾರಾಟ ಮಳಿಗೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ವಿವಿಧ ಮಹಿಳಾ ಸಂಘಟನೆ ಸದಸ್ಯರಾದ ಎಸ್.ಎ.ಛಬ್ಬಿ, ಎಸ್.ಎಂ.ಗೌಡರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕೆ.ಜಿ.ಶಾಂತಾರಾಮ್ ಅವರಿಗೆ ಮನವಿ ಸಲ್ಲಿಸಿದರು.

ಆರ್.ಎಸ್.ಲಕಮಾಪುರ ಮಾತನಾಡಿ, ‘ಪಟ್ಟಣದ ಬಸ್ ನಿಲ್ದಾಣ ಬಳಿ ಈಗಾಗಲೇ ಹಲವಾರು ಮದ್ಯ ಮಾರಾಟದ ಅಂಗಡಿಗಳಿದ್ದು ನೂತನ ಅಂಗಡಿಗೆ ಅನುಮತಿ ನೀಡಬಾರದು. ದಿನೇ ದಿನೇ ಯುವ ಪೀಳಿಗೆ ಮದ್ಯ ವ್ಯಸನಿಗಳಾಗಲು ಮಾರಾಟ ಮಳಿಗೆಗಳು ಕಾರಣವಾಗುತ್ತಿವೆ ಎಂದ ಅವರು, ಹಾಡಹಗಲೇ ಕುಡುಕರ ಹಾವಳಿಯಿಂದ ಮಹಿಳೆಯರು ಮಕ್ಕಳು ತಿರುಗಾಡದ ಪರಿಸ್ಥಿತಿ ಬಂದಿರುವುದು ಬೇಸರದ ಸಂಗತಿ’ ಎಂದರು.

‘ಜಿಲ್ಲಾಧಿಕಾರಿಗಳು ಯಾವುದೇ ಕಾರಣಕ್ಕೂ ಹೊಸ ಮದ್ಯದ ಅಂಗಡಿ ತೆರೆಯಲು ಅವಕಾಶ ನೀಡಬಾರದು. ಒಂದು ವೇಳೆ ಅವಕಾಶ ನೀಡಿದ್ದೇ ಆದರೆ ಪಟ್ಟಣದ ಎಲ್ಲ ಮಹಿಳಾ ಸಂಘಟನೆ ಸದಸ್ಯೆಯರು, ಶಿಕ್ಷಕರ ಕಾಲೋನಿ ನಾಗರಿಕರು ಹಾಗೂ ಸ್ಥಳೀಯ ಪ್ರಜ್ಞಾವಂತರು ಬೀದಿಗಿಳಿದು ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.

ಮಹಿಳಾ ಸಂಘಟನೆಯ ಸದಸ್ಯರಾದ ಶಾಂತವ್ವ ಹಡಪದ, ಸಾವಿತ್ರಿಬಾಯಿ ಪ್ರತಿಭಟನೆಯ ನೇತೃತ್ವವಹಿಸಿದ್ದರು. ಪಿ.ಎನ್.ಹುಲಮನಿ, ಶಂಕ್ರಮ್ಮ ಜಾಬಳಗಿ, ಗಂಗವ್ವ ಚಂದಾವರಿ, ಎಸ್.ಪಿ.ಕಠಾರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT