<p><strong>ರಬಕವಿ ಬನಹಟ್ಟಿ</strong>: ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ಬನಹಟ್ಟಿಯ ಈಶ್ವರಲಿಂಗ ಮೈದಾನದಲ್ಲಿ ಮತ್ತು ರಾಂಪುರದ ನೀಲಕಂಠೇಶ್ವರ ಮಠದಲ್ಲಿ ನಡೆದ ಇ-ಖಾತಾ ಅಭಿಯಾನಕ್ಕೆ ರಬಕವಿ ಬನಹಟ್ಟಿ ನಗರಸಭೆಯ ಪೌರಾಯುಕ್ತ ರಮೇಶ ಜಾಧವ ಭಾನುವಾರ ಚಾಲನೆ ನೀಡಿದರು.</p>.<p>ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಬ್ಬರು ಇ-ಖಾತಾ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಆಸ್ತಿಗಳ ಅಧಿಕೃತ ಮಾಲೀಕರು ತಮ್ಮ ಆಸ್ತಿಗೆ ಸಂಬಂಧಪಟ್ಟಂತೆ ಖರೀದಿ ಪತ್ರ, ದಾನ ಪತ್ರ, ಚಾಲ್ತಿಯಲ್ಲಿರುವ ಋಣಭಾರ ಪ್ರಮಾಣ ಪತ್ರ, ಮನೆ, ನೀರಿನ ಕರ ತುಂಬಿದ ಪಾವತಿಗಳು, ಆಧಾರ ಚೀಟಿ ಮತ್ತು ಆಸ್ತಿಯ ಭಾವಚಿತ್ರಗಳನ್ನು ಅರ್ಜಿಗೆ ಲಗತ್ತಿಸಿ ಎ ಮತ್ತು ಬಿ ಖಾತೆಯ ಡಿಜಿಟಲ್ ಪತ್ರ ಪಡೆಯಬೇಕು ಎಂದು ತಿಳಿಸಿದರು.</p>.<p>ಆಸ್ತಿ ಮಾಲೀಕರು ಇ- ಆಸ್ತಿಗೆ ಸಂಬಂಧಪಟ್ಟಂತೆ ಯಾವುದೇ ಸಮಸ್ಯೆಗಳು ಇದ್ದರೆ ನಗರಸಭೆಯ ಕಂದಾಯ ಇಲಾಖೆ ಅಧಿಕಾರಿಗಳನ್ನು ಭೇಟಿಯಾಗಿ ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ನಗರಸಭೆಯ ಸದಸ್ಯ ಶಿವಾನಂದ ಬುದ್ನಿ, ಅಭಿನಂದನ ಸೋನಾರ, ವಸಂತ ಪವಾರ, ಮುತ್ತಣ್ಣ ಚೌಡಕಿ, ಸುನೀಲ ಬಬಲಾದಿ, ಶಿವಪುತ್ರ ಮೂಡಲಗಿ, ಮುಜಾವರ, ಮೊಕಾಶಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಬಕವಿ ಬನಹಟ್ಟಿ</strong>: ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ಬನಹಟ್ಟಿಯ ಈಶ್ವರಲಿಂಗ ಮೈದಾನದಲ್ಲಿ ಮತ್ತು ರಾಂಪುರದ ನೀಲಕಂಠೇಶ್ವರ ಮಠದಲ್ಲಿ ನಡೆದ ಇ-ಖಾತಾ ಅಭಿಯಾನಕ್ಕೆ ರಬಕವಿ ಬನಹಟ್ಟಿ ನಗರಸಭೆಯ ಪೌರಾಯುಕ್ತ ರಮೇಶ ಜಾಧವ ಭಾನುವಾರ ಚಾಲನೆ ನೀಡಿದರು.</p>.<p>ರಬಕವಿ ಬನಹಟ್ಟಿ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಬ್ಬರು ಇ-ಖಾತಾ ಸೌಲಭ್ಯವನ್ನು ಪಡೆದುಕೊಳ್ಳಬೇಕು. ಆಸ್ತಿಗಳ ಅಧಿಕೃತ ಮಾಲೀಕರು ತಮ್ಮ ಆಸ್ತಿಗೆ ಸಂಬಂಧಪಟ್ಟಂತೆ ಖರೀದಿ ಪತ್ರ, ದಾನ ಪತ್ರ, ಚಾಲ್ತಿಯಲ್ಲಿರುವ ಋಣಭಾರ ಪ್ರಮಾಣ ಪತ್ರ, ಮನೆ, ನೀರಿನ ಕರ ತುಂಬಿದ ಪಾವತಿಗಳು, ಆಧಾರ ಚೀಟಿ ಮತ್ತು ಆಸ್ತಿಯ ಭಾವಚಿತ್ರಗಳನ್ನು ಅರ್ಜಿಗೆ ಲಗತ್ತಿಸಿ ಎ ಮತ್ತು ಬಿ ಖಾತೆಯ ಡಿಜಿಟಲ್ ಪತ್ರ ಪಡೆಯಬೇಕು ಎಂದು ತಿಳಿಸಿದರು.</p>.<p>ಆಸ್ತಿ ಮಾಲೀಕರು ಇ- ಆಸ್ತಿಗೆ ಸಂಬಂಧಪಟ್ಟಂತೆ ಯಾವುದೇ ಸಮಸ್ಯೆಗಳು ಇದ್ದರೆ ನಗರಸಭೆಯ ಕಂದಾಯ ಇಲಾಖೆ ಅಧಿಕಾರಿಗಳನ್ನು ಭೇಟಿಯಾಗಿ ಪರಿಹರಿಸಿಕೊಳ್ಳಬೇಕು ಎಂದು ತಿಳಿಸಿದರು.</p>.<p>ನಗರಸಭೆಯ ಸದಸ್ಯ ಶಿವಾನಂದ ಬುದ್ನಿ, ಅಭಿನಂದನ ಸೋನಾರ, ವಸಂತ ಪವಾರ, ಮುತ್ತಣ್ಣ ಚೌಡಕಿ, ಸುನೀಲ ಬಬಲಾದಿ, ಶಿವಪುತ್ರ ಮೂಡಲಗಿ, ಮುಜಾವರ, ಮೊಕಾಶಿ ಸೇರಿದಂತೆ ಅನೇಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>