<p><strong>ಮಹಾಲಿಂಗಪುರ</strong>: ‘ದೇಶಕ್ಕೆ ಸ್ವಾತಂತ್ರ್ಯ ಬಂದರೂ ದೇಶ ಇನ್ನೂ ಸಂಪೂರ್ಣ ಸ್ವಾವಲಂಬಿಯಾಗಿಲ್ಲ. ನಾವೆಲ್ಲರೂ ಸ್ವದೇಶಿ ವಸ್ತುಗಳ ಬಳಕೆಗೆ ಒತ್ತು ನೀಡಬೇಕು’ ಎಂದು ಶಾಸಕ ಸಿದ್ದು ಸವದಿ ಹೇಳಿದರು.</p>.<p>ಪಟ್ಟಣದ ಕೌಜಲಗಿ ನಿಂಗಮ್ಮ ಸಾಂಸ್ಕೃತಿಕ ಭವನದಲ್ಲಿ ಬಿಜೆಪಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದಲ್ಲಿ ಮಾತನಾಡಿದರು.</p>.<p>‘ನಮ್ಮ ಸ್ಥಳೀಯ ಕೈಗಾರಿಕೆ, ವ್ಯಾಪಾರ ಉದ್ಯಮಗಳಿಗೆ ನಾವು ಹೆಚ್ಚಿನ ಬೆಂಬಲ ನೀಡಬೇಕು ಹಾಗೂ ಈ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ. ವಿದೇಶಿ ವಸ್ತುಗಳ ಮೋಹವನ್ನು ಬಿಟ್ಟು ಸ್ವದೇಶಿ ವಸ್ತುಗಳ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು’ ಎಂದರು.</p>.<p>ಸುರೇಶ ಅಕ್ಕಿವಾಟ ಮಾತನಾಡಿದರು. ಆತ್ಮನಿರ್ಭರ ಭಾರತ ನಿರ್ಮಾಣದ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.</p>.<p>ಶಂಕರಗೌಡ ಪಾಟೀಲ, ಮಹೇಶ ಜಿಡ್ಡಿಮನಿ, ಬಸವರಾಜ ಯರಗಟ್ಟಿ, ಮಲ್ಲಪ್ಪ ದಲಾಲ, ಜಗದೀಶ ಜಕ್ಕನ್ನವರ, ಶೇಖರ ಮಗದುಮ್, ಸೋಮು ಶಿರೋಳ, ಮಹಾಂತೇಶ ಪಾತ್ರೋಟ, ಆನಂದ ಕಂಪು, ಮಹಾಲಿಂಗ ಬುದ್ನಿ, ಪ್ರಾಚಾರ್ಯ ಶಿವಪ್ಪ ಜೋಡಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ</strong>: ‘ದೇಶಕ್ಕೆ ಸ್ವಾತಂತ್ರ್ಯ ಬಂದರೂ ದೇಶ ಇನ್ನೂ ಸಂಪೂರ್ಣ ಸ್ವಾವಲಂಬಿಯಾಗಿಲ್ಲ. ನಾವೆಲ್ಲರೂ ಸ್ವದೇಶಿ ವಸ್ತುಗಳ ಬಳಕೆಗೆ ಒತ್ತು ನೀಡಬೇಕು’ ಎಂದು ಶಾಸಕ ಸಿದ್ದು ಸವದಿ ಹೇಳಿದರು.</p>.<p>ಪಟ್ಟಣದ ಕೌಜಲಗಿ ನಿಂಗಮ್ಮ ಸಾಂಸ್ಕೃತಿಕ ಭವನದಲ್ಲಿ ಬಿಜೆಪಿ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಶನಿವಾರ ಹಮ್ಮಿಕೊಂಡ ಆತ್ಮನಿರ್ಭರ ಭಾರತ ಸಂಕಲ್ಪ ಅಭಿಯಾನದಲ್ಲಿ ಮಾತನಾಡಿದರು.</p>.<p>‘ನಮ್ಮ ಸ್ಥಳೀಯ ಕೈಗಾರಿಕೆ, ವ್ಯಾಪಾರ ಉದ್ಯಮಗಳಿಗೆ ನಾವು ಹೆಚ್ಚಿನ ಬೆಂಬಲ ನೀಡಬೇಕು ಹಾಗೂ ಈ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕಾಗಿದೆ. ವಿದೇಶಿ ವಸ್ತುಗಳ ಮೋಹವನ್ನು ಬಿಟ್ಟು ಸ್ವದೇಶಿ ವಸ್ತುಗಳ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು’ ಎಂದರು.</p>.<p>ಸುರೇಶ ಅಕ್ಕಿವಾಟ ಮಾತನಾಡಿದರು. ಆತ್ಮನಿರ್ಭರ ಭಾರತ ನಿರ್ಮಾಣದ ಪ್ರತಿಜ್ಞೆಯನ್ನು ಸ್ವೀಕರಿಸಲಾಯಿತು.</p>.<p>ಶಂಕರಗೌಡ ಪಾಟೀಲ, ಮಹೇಶ ಜಿಡ್ಡಿಮನಿ, ಬಸವರಾಜ ಯರಗಟ್ಟಿ, ಮಲ್ಲಪ್ಪ ದಲಾಲ, ಜಗದೀಶ ಜಕ್ಕನ್ನವರ, ಶೇಖರ ಮಗದುಮ್, ಸೋಮು ಶಿರೋಳ, ಮಹಾಂತೇಶ ಪಾತ್ರೋಟ, ಆನಂದ ಕಂಪು, ಮಹಾಲಿಂಗ ಬುದ್ನಿ, ಪ್ರಾಚಾರ್ಯ ಶಿವಪ್ಪ ಜೋಡಟ್ಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>