ರೇಷ್ಮೆ ಇಲಾಖೆ ನಿವೃತ್ತ ನೌಕರ ಶಶಿಕಾಂತ ಬಡ್ಡೂರ ಹಾಗೂ ಸುಲೋಚನಾ ದಂಪತಿ ಪುತ್ರ ಅಭಿಲಾಷರಾಯಬಾಗದ ಮಹಾವೀರ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಮುಗಿಸಿದ್ದಾರೆ. ಧಾರವಾಡದ ಜೆಎಸ್ಎಸ್ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದು, ಬೆಂಗಳೂರಿನ ಡಾ.ಅಂಬೇಡ್ಕರ್ ಎಂಜಿನಿಯರಿಂಗ್ ಕಾಲೇಜಿನಿಂದ ಮೆಕ್ಯಾನಿಕ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಅಲ್ಲಿಯೂ ಚಿನ್ನದ ಪದಕ ತಮ್ಮದಾಗಿಸಿಕೊಂಡಿದ್ದರು. ನಂತರ ಟಿಸಿಎಸ್ ಸಂಸ್ಥೆಯಲ್ಲಿ ಕೆಲಕಾಲ ಕೆಲಸ ಮಾಡಿದ್ದರು.