<p><strong>ಬಾಗಲಕೋಟೆ</strong>: ಕೋವಿಡ್–19 ಹರಡುವಿಕೆ ಭೀತಿಯಿಂದ ವಿಧಿಸಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತರಾತುರಿಯಲ್ಲಿ ಊರಿಗೆ ಹೊರಟವರು ಅಪಘಾತದಲ್ಲಿ ಮಸಣ ಸೇರಿದ್ದಾರೆ.ಇಳಕಲ್ ಸಮೀಪ ಹಿರೇಕೊಡಗಲಿ ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ ಟೈರ್ ಸಿಡಿದು ಕಾರು ಉರುಳಿ ಬಿದ್ದಿದೆ. ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.</p>.<p>ಕಾರು ಬೆಂಗಳೂರಿನಿಂದ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿಗೆ ಹೊರಟಿತ್ತು. ಕಾರಿನಲ್ಲಿದ್ದ ಸುವರ್ಣಾ (32) ಹಾಗೂ ಬಸವಣ್ಣೆಪ್ಪ (81) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಿತಾ (22) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾದರು.</p>.<p>ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಹುಂಡೈ ವೆರ್ನಾ ಕಾರು ಟೈರ್ ಸಿಡಿಯುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಅಲ್ಲಿದ್ದ ಕಲ್ಲು ಬಂಡೆಗಳಿಗೆ ಡಿಕ್ಕಿ ಹೊಡೆದಿದೆ.</p>.<p>ಅಪಘಾತದಲ್ಲಿ ಯಶ್, ಜಾಹ್ನವಿ ಹಾಗೂ ಚಾಲಕ ಪ್ರಭು ಗಾಯಗೊಂಡಿದ್ದಾರೆ. ಅವರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಕೋವಿಡ್–19 ಹರಡುವಿಕೆ ಭೀತಿಯಿಂದ ವಿಧಿಸಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತರಾತುರಿಯಲ್ಲಿ ಊರಿಗೆ ಹೊರಟವರು ಅಪಘಾತದಲ್ಲಿ ಮಸಣ ಸೇರಿದ್ದಾರೆ.ಇಳಕಲ್ ಸಮೀಪ ಹಿರೇಕೊಡಗಲಿ ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ ಟೈರ್ ಸಿಡಿದು ಕಾರು ಉರುಳಿ ಬಿದ್ದಿದೆ. ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.</p>.<p>ಕಾರು ಬೆಂಗಳೂರಿನಿಂದ ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ಖಟಕ ಚಿಂಚೋಳಿಗೆ ಹೊರಟಿತ್ತು. ಕಾರಿನಲ್ಲಿದ್ದ ಸುವರ್ಣಾ (32) ಹಾಗೂ ಬಸವಣ್ಣೆಪ್ಪ (81) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸವಿತಾ (22) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವಿಗೀಡಾದರು.</p>.<p>ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಹುಂಡೈ ವೆರ್ನಾ ಕಾರು ಟೈರ್ ಸಿಡಿಯುತ್ತಿದ್ದಂತೆಯೇ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ನುಗ್ಗಿ ಅಲ್ಲಿದ್ದ ಕಲ್ಲು ಬಂಡೆಗಳಿಗೆ ಡಿಕ್ಕಿ ಹೊಡೆದಿದೆ.</p>.<p>ಅಪಘಾತದಲ್ಲಿ ಯಶ್, ಜಾಹ್ನವಿ ಹಾಗೂ ಚಾಲಕ ಪ್ರಭು ಗಾಯಗೊಂಡಿದ್ದಾರೆ. ಅವರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಳಕಲ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>