ಬಾಗಲಕೋಟೆ: ಕೋವಿಡ್–19 ಹರಡುವಿಕೆ ಭೀತಿಯಿಂದ ವಿಧಿಸಿರುವ ನಿರ್ಬಂಧಗಳ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತರಾತುರಿಯಲ್ಲಿ ಊರಿಗೆ ಹೊರಟವರು ಅಪಘಾತದಲ್ಲಿ ಮಸಣ ಸೇರಿದ್ದಾರೆ.ಇಳಕಲ್ ಸಮೀಪ ಹಿರೇಕೊಡಗಲಿ ಕ್ರಾಸ್ ಬಳಿ ಮಂಗಳವಾರ ಬೆಳಿಗ್ಗೆ ಟೈರ್ ಸಿಡಿದು ಕಾರು ಉರುಳಿ ಬಿದ್ದಿದೆ. ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.