<p><strong>ಬಾಗಲಕೋಟೆ</strong>: ಹುನಗುಂದ ತಾಲ್ಲೂಕಿನ ಬೇವಿನಮಟ್ಡಿ ಕ್ರಾಸ್ ಬಳಿ ಭಾನುವಾರ ತಡರಾತ್ರಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.</p>.<p>ಇಳಕಲ್ ನಗರದ ನಿವಾಸಿಗಳಾದ ಚಂದ್ರಶೇಖರ ಬುಟ್ಟಾ (22), ನವೀನ್ ಸಾಕಾ (20), ಚೆನ್ನಬಸವ ಅಂಜಿ (22) ಹಾಗೂ ಬಸವರಾಜ ಭಂಡಾರಿ (33) ಮೃತಪಟ್ಡವರು. ಚಾಲಕ ವಿಜಯಕುಮಾರ ಬಂಡಿ ತೀವ್ರ ಗಾಯಗೊಂಡಿದ್ದು ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಗುಳೇದಗುಡ್ಡ ಪಟ್ಟಣದಲ್ಲಿ ಸ್ನೇಹಿತರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡು ಇಳಕಲ್ ಗೆ ವಾಪಸ್ ತೆರಳುವಾಗ ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.</p>.<p>ಅಪಘಾತದ ನಂತರ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಕಾರಿನ ಚಾಲಕ ಹಾಗೂ ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಆಧರಿಸಿ ಲಾರಿ, ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.</p>.<p>ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಹುನಗುಂದ ತಾಲ್ಲೂಕಿನ ಬೇವಿನಮಟ್ಡಿ ಕ್ರಾಸ್ ಬಳಿ ಭಾನುವಾರ ತಡರಾತ್ರಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.</p>.<p>ಇಳಕಲ್ ನಗರದ ನಿವಾಸಿಗಳಾದ ಚಂದ್ರಶೇಖರ ಬುಟ್ಟಾ (22), ನವೀನ್ ಸಾಕಾ (20), ಚೆನ್ನಬಸವ ಅಂಜಿ (22) ಹಾಗೂ ಬಸವರಾಜ ಭಂಡಾರಿ (33) ಮೃತಪಟ್ಡವರು. ಚಾಲಕ ವಿಜಯಕುಮಾರ ಬಂಡಿ ತೀವ್ರ ಗಾಯಗೊಂಡಿದ್ದು ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ಗುಳೇದಗುಡ್ಡ ಪಟ್ಟಣದಲ್ಲಿ ಸ್ನೇಹಿತರೊಬ್ಬರ ಬರ್ತಡೇ ಪಾರ್ಟಿಯಲ್ಲಿ ಪಾಲ್ಗೊಂಡು ಇಳಕಲ್ ಗೆ ವಾಪಸ್ ತೆರಳುವಾಗ ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.</p>.<p>ಅಪಘಾತದ ನಂತರ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಕಾರಿನ ಚಾಲಕ ಹಾಗೂ ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿ ಆಧರಿಸಿ ಲಾರಿ, ಚಾಲಕನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.</p>.<p>ಹುನಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>