<p><strong>ಬಾಗಲಕೋಟೆ</strong>: ನವನಗರದಲ್ಲಿ ಯುವಕರ ಮಧ್ಯ ಉಂಟಾದ ಗಲಾಟೆಯಲ್ಲಿ ಅದೇ ಮಾರ್ಗದಲ್ಲಿ ಹೊರಟಿದ್ದ ಮೌಲ್ವಿ ಒಬ್ಬರ ಮೇಲೆ ಯುವಕರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.</p><p>ಭಾನುವಾರ ರಾತ್ರಿ ನವನಗರದ ಸೆಕ್ಟರ್ ನಂಬರ್ 4 ರಲ್ಲಿ ಯುವಕರ ನಡುವೆ ಗಲಾಟೆ ನಡೆದಿದೆ. ಸ್ಕೂಟಿಯಲ್ಲಿ ಹೊರಟಿದ್ದ ಮೌಲ್ವಿ ಮೇಲೆ ಹಲ್ಲೆ ಮಾಡಿದ್ದು, ಕಾರಣ ತಿಳಿದು ಬಂದಿಲ್ಲ.</p><p>ಮೌಲ್ವಿ ಮೇಲೆ ಹಲ್ಲೆ ನಡೆದಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಯುವಕರು ನವನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ತಪ್ಪಿಸ್ಥರ ಬಂಧನಕ್ಕೆ ಒತ್ತಾಯಿಸಿದರು.</p><p>ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕಾರ್ತಿಕ್ ಹಾಗೂ ಪ್ರದೀಪ ಎಂಬ ಯುವಕರನ್ನು ಬಂಧಿಸಿದ್ದಾರೆ.</p><p>ಹೆಚ್ಚುವರಿ ಎಸ್ಪಿಗಳಾದ ಮಹಾಂತೇಶ್ವರ ಜಿದ್ದಿ, ಪ್ರಸನ್ನ ದೇಸಾಯಿ ನವನಗರ ಠಾಣೆ ಬಳಿ ಸೇರಿದ್ದ ಜನರಿಗೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ ಮೇಲೆ ಜನರು ತೆರಳಿದರು.</p><p>ಮುಂಜಾಗ್ರತಾ ಕ್ರಮವಾಗಿ ನವನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. </p>.<div><blockquote>ನವನಗರದ ಸೆಕ್ಟರ್ ನಂಬರ್ 4 ರಲ್ಲಿ ನಾಲ್ವರ ನಡುವೆ ಜಗಳ ನಡೆದಿದ್ದು, ಮೌಲ್ವಿ ಮೇಲೆ ಹಲ್ಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. </blockquote><span class="attribution">-ಅಮರನಾಥ ರೆಡ್ಡಿ, ಎಸ್ಪಿ, ಬಾಗಲಕೋಟೆ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ನವನಗರದಲ್ಲಿ ಯುವಕರ ಮಧ್ಯ ಉಂಟಾದ ಗಲಾಟೆಯಲ್ಲಿ ಅದೇ ಮಾರ್ಗದಲ್ಲಿ ಹೊರಟಿದ್ದ ಮೌಲ್ವಿ ಒಬ್ಬರ ಮೇಲೆ ಯುವಕರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.</p><p>ಭಾನುವಾರ ರಾತ್ರಿ ನವನಗರದ ಸೆಕ್ಟರ್ ನಂಬರ್ 4 ರಲ್ಲಿ ಯುವಕರ ನಡುವೆ ಗಲಾಟೆ ನಡೆದಿದೆ. ಸ್ಕೂಟಿಯಲ್ಲಿ ಹೊರಟಿದ್ದ ಮೌಲ್ವಿ ಮೇಲೆ ಹಲ್ಲೆ ಮಾಡಿದ್ದು, ಕಾರಣ ತಿಳಿದು ಬಂದಿಲ್ಲ.</p><p>ಮೌಲ್ವಿ ಮೇಲೆ ಹಲ್ಲೆ ನಡೆದಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಜನ ಯುವಕರು ನವನಗರ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ತಪ್ಪಿಸ್ಥರ ಬಂಧನಕ್ಕೆ ಒತ್ತಾಯಿಸಿದರು.</p><p>ಹಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕಾರ್ತಿಕ್ ಹಾಗೂ ಪ್ರದೀಪ ಎಂಬ ಯುವಕರನ್ನು ಬಂಧಿಸಿದ್ದಾರೆ.</p><p>ಹೆಚ್ಚುವರಿ ಎಸ್ಪಿಗಳಾದ ಮಹಾಂತೇಶ್ವರ ಜಿದ್ದಿ, ಪ್ರಸನ್ನ ದೇಸಾಯಿ ನವನಗರ ಠಾಣೆ ಬಳಿ ಸೇರಿದ್ದ ಜನರಿಗೆ ಪ್ರಕರಣ ದಾಖಲಿಸಿಕೊಂಡು ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದ ಮೇಲೆ ಜನರು ತೆರಳಿದರು.</p><p>ಮುಂಜಾಗ್ರತಾ ಕ್ರಮವಾಗಿ ನವನಗರದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. </p>.<div><blockquote>ನವನಗರದ ಸೆಕ್ಟರ್ ನಂಬರ್ 4 ರಲ್ಲಿ ನಾಲ್ವರ ನಡುವೆ ಜಗಳ ನಡೆದಿದ್ದು, ಮೌಲ್ವಿ ಮೇಲೆ ಹಲ್ಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. </blockquote><span class="attribution">-ಅಮರನಾಥ ರೆಡ್ಡಿ, ಎಸ್ಪಿ, ಬಾಗಲಕೋಟೆ.</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>