<p><strong>ಮಹಾಲಿಂಗಪುರ:</strong> ‘ಸಿದ್ಧಾರೂಢರ ತತ್ವ, ಚಿಂತನೆ, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಶನಿವಾರ ನಡೆದ ವಾರದ ಸತ್ಸಂಗ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.</p>.<p>‘ಯಾರು ಧರ್ಮವನ್ನು ರಕ್ಷಿಸುತ್ತಾರೋ ಅವರನ್ನು ಧರ್ಮವು ರಕ್ಷಿಸುತ್ತದೆ. ಮಾನವ ಜನ್ಮವನ್ನು ವ್ಯರ್ಥ ಕಾಲಹರಣದಲ್ಲಿ ಕಳೆಯದೇ ನಿತ್ಯ ಜಪ, ತಪ, ದಾನ, ಧರ್ಮ, ದಾಸೋಹ, ಅಧ್ಯಾತ್ಮ ಚಿಂತನೆಗಳ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಬೇಕು’ ಎಂದರು.</p>.<p>ಮುಖಂಡ ಲಕ್ಕಪ್ಪ ಚಮಕೇರಿ ದಂಪತಿ ತುಲಾಭಾರ ಕಾರ್ಯಕ್ರಮ ನಡೆಯಿತು. ರನ್ನ ಬೆಳಗಲಿಯ ಸಿದ್ಧಾರೂಢಮಠದ ಸಿದ್ಧರಾಮ ಶಿವಯೋಗಿ ಮಾತನಾಡಿದರು. ಕಂಕಣವಾಡಿಯ ಮಾರುತಿ ಶರಣರು, ರನ್ನಬೆಳಗಲಿಯ ಸದಾಶಿವ ಗುರೂಜಿ, ಮಲ್ಲೇಶಪ್ಪ ಕಟಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹಾಲಿಂಗಪುರ:</strong> ‘ಸಿದ್ಧಾರೂಢರ ತತ್ವ, ಚಿಂತನೆ, ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದ ಸಹಜಾನಂದ ಸ್ವಾಮೀಜಿ ಹೇಳಿದರು.</p>.<p>ಪಟ್ಟಣದ ಸಿದ್ಧಾರೂಢ ಬ್ರಹ್ಮವಿದ್ಯಾಶ್ರಮದಲ್ಲಿ ಶನಿವಾರ ನಡೆದ ವಾರದ ಸತ್ಸಂಗ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.</p>.<p>‘ಯಾರು ಧರ್ಮವನ್ನು ರಕ್ಷಿಸುತ್ತಾರೋ ಅವರನ್ನು ಧರ್ಮವು ರಕ್ಷಿಸುತ್ತದೆ. ಮಾನವ ಜನ್ಮವನ್ನು ವ್ಯರ್ಥ ಕಾಲಹರಣದಲ್ಲಿ ಕಳೆಯದೇ ನಿತ್ಯ ಜಪ, ತಪ, ದಾನ, ಧರ್ಮ, ದಾಸೋಹ, ಅಧ್ಯಾತ್ಮ ಚಿಂತನೆಗಳ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಬೇಕು’ ಎಂದರು.</p>.<p>ಮುಖಂಡ ಲಕ್ಕಪ್ಪ ಚಮಕೇರಿ ದಂಪತಿ ತುಲಾಭಾರ ಕಾರ್ಯಕ್ರಮ ನಡೆಯಿತು. ರನ್ನ ಬೆಳಗಲಿಯ ಸಿದ್ಧಾರೂಢಮಠದ ಸಿದ್ಧರಾಮ ಶಿವಯೋಗಿ ಮಾತನಾಡಿದರು. ಕಂಕಣವಾಡಿಯ ಮಾರುತಿ ಶರಣರು, ರನ್ನಬೆಳಗಲಿಯ ಸದಾಶಿವ ಗುರೂಜಿ, ಮಲ್ಲೇಶಪ್ಪ ಕಟಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>