<p>ಮುಧೋಳ: ‘ವೇಮನರ ತತ್ವ, ಹೇಮರಡ್ಡಿ ಮಲ್ಲಮ್ಮಳ ಜೀವನಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಬದುಕು ನಡೆಸಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪನಿರ್ದೇಶಕ ಜಿ.ಬಿ.ಗೌಡಪ್ಪಗೋಳ ಹೇಳಿದರು.</p>.<p> ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿದ ಬೆನಕಟ್ಟಿಯ ಹೇಮ-ವೇಮನ ಸದ್ಬೋಧನ ಪೀಠದ 14 ನೇ ವಾರ್ಷಿಕೋತ್ಸವ, ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಿಸರ್ಗ ಚಿಕಿತ್ಸಕ ಡಾ.ಎಚ್.ಟಿ.ಮಳಲಿ ಮಾತನಾಡಿ, ‘ಮನುಷ್ಯನಿಗೆ ಇಂದು ಅಧ್ಯಾತ್ಮದ ಜ್ಞಾನ ಬೇಕಿದ್ದು, ಶಿಕ್ಷಣದಲ್ಲಿ ಆಧ್ಯಾತ್ಮಿಕ ಶಿಕ್ಷಣ ನೀಡಬೇಕಿದೆ. ಅದರಿಂದ ನೆಮ್ಮದಿ, ಆನಂದದ ಜೀವನ ಲಭಿಸಬಹುದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಹೇಮರಡ್ಡಿ ಮಲ್ಲಮ್ಮ ಶೈಕ್ಷಣಿಕ ಮತ್ತು ಧಾರ್ಮಿಕ ಸಂಸ್ಥೆಯ ಅಧ್ಯಕ್ಷ ದಯಾನಂದ ಪಾಟೀಲ, ‘ಪರೋಪಕಾರದಿಂದ ಇನ್ನೊಬ್ಬರ ಬದುಕಿಗೆ ನೆರವಾಗುವುದೇ ಶ್ರೇಷ್ಠ ಕಾರ್ಯ’ ಎಂದರು.</p>.<p>ತೊಂಡಿಕಟ್ಟಿಯ ವೆಂಕಟೇಶ್ವರ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಮೂವರು ಪಿಯುಸಿ ಹಾಗೂ ಮೆಡಿಕಲ್ ಓದುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು.</p>.<p>ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಮತ್ತು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಬೆನಕಟ್ಟಿಯ ಹೇಮರಡ್ಡಿ ಮಲ್ಲಮ್ಮ ಭಜನಾ ತಂಡದವರು ವೇಮನರ ವಚನ ಪಠಿಸಿದರು. ಡಾ.ಸತೀಶ ಮಲಘಾಣ ಸ್ವಾಗತಿಸಿದರು. ರಮೇಶ ಅಣ್ಣಿಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಶೇಖರ ರೂಗಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಧೋಳ: ‘ವೇಮನರ ತತ್ವ, ಹೇಮರಡ್ಡಿ ಮಲ್ಲಮ್ಮಳ ಜೀವನಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾರ್ಥಕ ಬದುಕು ನಡೆಸಬೇಕು’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪನಿರ್ದೇಶಕ ಜಿ.ಬಿ.ಗೌಡಪ್ಪಗೋಳ ಹೇಳಿದರು.</p>.<p> ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರ ಜರುಗಿದ ಬೆನಕಟ್ಟಿಯ ಹೇಮ-ವೇಮನ ಸದ್ಬೋಧನ ಪೀಠದ 14 ನೇ ವಾರ್ಷಿಕೋತ್ಸವ, ಬಡ ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ನಿಸರ್ಗ ಚಿಕಿತ್ಸಕ ಡಾ.ಎಚ್.ಟಿ.ಮಳಲಿ ಮಾತನಾಡಿ, ‘ಮನುಷ್ಯನಿಗೆ ಇಂದು ಅಧ್ಯಾತ್ಮದ ಜ್ಞಾನ ಬೇಕಿದ್ದು, ಶಿಕ್ಷಣದಲ್ಲಿ ಆಧ್ಯಾತ್ಮಿಕ ಶಿಕ್ಷಣ ನೀಡಬೇಕಿದೆ. ಅದರಿಂದ ನೆಮ್ಮದಿ, ಆನಂದದ ಜೀವನ ಲಭಿಸಬಹುದು’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಹೇಮರಡ್ಡಿ ಮಲ್ಲಮ್ಮ ಶೈಕ್ಷಣಿಕ ಮತ್ತು ಧಾರ್ಮಿಕ ಸಂಸ್ಥೆಯ ಅಧ್ಯಕ್ಷ ದಯಾನಂದ ಪಾಟೀಲ, ‘ಪರೋಪಕಾರದಿಂದ ಇನ್ನೊಬ್ಬರ ಬದುಕಿಗೆ ನೆರವಾಗುವುದೇ ಶ್ರೇಷ್ಠ ಕಾರ್ಯ’ ಎಂದರು.</p>.<p>ತೊಂಡಿಕಟ್ಟಿಯ ವೆಂಕಟೇಶ್ವರ ಮಹಾರಾಜರು ಸಾನ್ನಿಧ್ಯ ವಹಿಸಿದ್ದರು.</p>.<p>ಕಾರ್ಯಕ್ರಮದಲ್ಲಿ ಮೂವರು ಪಿಯುಸಿ ಹಾಗೂ ಮೆಡಿಕಲ್ ಓದುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು.</p>.<p>ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ ಮತ್ತು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಸಾಧಕರನ್ನು ಸನ್ಮಾನಿಸಲಾಯಿತು.</p>.<p>ಬೆನಕಟ್ಟಿಯ ಹೇಮರಡ್ಡಿ ಮಲ್ಲಮ್ಮ ಭಜನಾ ತಂಡದವರು ವೇಮನರ ವಚನ ಪಠಿಸಿದರು. ಡಾ.ಸತೀಶ ಮಲಘಾಣ ಸ್ವಾಗತಿಸಿದರು. ರಮೇಶ ಅಣ್ಣಿಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಶೇಖರ ರೂಗಿ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>