₹1.20 ಕೋಟಿ ನಷ್ಟ:ಕೊರೊನಾ ವೈರಸ್ ಹರಡುವಿಕೆ ಮುನ್ನೆಚ್ಚರಿಕೆ ಸಂಬಂಧ ರಾಜ್ಯ ಸರ್ಕಾರ ತುರ್ತು ಪರಿಸ್ಥಿತಿ ಘೋಷಿಸಿದ ನಂತರ ವಾಯವ್ಯ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಕಳೆದ ನಾಲ್ಕು ದಿನಗಳಲ್ಲಿ ಸಂಸ್ಥೆಗೆ ₹1.20 ಕೋಟಿ ನಷ್ಟವಾಗಿದೆ. ಶೇ 15ರಷ್ಟು ಮಾರ್ಗಗಳಲ್ಲಿ ಬಸ್ ಓಡಾಟ ನಿಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಪ್ರಯಾಣಿಕರ ಸ್ಪಂದನೆ ಗಮನಿಸಿ ಪುನಃ ಬಸ್ ಓಡಾಟ ಆರಂಭಿಸಲಾಗುವುದು ಎಂದು ಹುಬ್ಬಳ್ಳಿಯ ವಾಯವ್ಯ ಸಾರಿಗೆ ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕ ಸಂತೋಷ ಕುಮಾರ ’ಪ್ರಜಾವಾಣಿ’ಗೆ ತಿಳಿಸಿದರು.