ಅಡ್ಡ ಮತದಾನದ ಒಳ ಏಟು: ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದ ಹುನಗುಂದದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಅವಕಾಶ ಸಿಗದ ಕಾರಣ ಮತದಾನದಿಂದ ದೂರ ಉಳಿದಿದ್ದರು. ಇದರಿಂದ ಪಕ್ಷದ ಬೆಂಬಲಿಗರಿಗೆ ಗೆಲುವು ಸುಲಭ ಎಂದು ಬಿಜೆಪಿ ನಾಯಕರು ಭಾವಿಸಿದ್ದರು. ಆದರೆ ಸ್ವಪಕ್ಷದ ಸದಸ್ಯರ ಅಡ್ಡಮತದಾನದ ಒಳ ಏಟು ಕಾಂಗ್ರೆಸ್ ಬೆಂಬಲಿತರ ಆಯ್ಕೆಗೆ ನೆರವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.