<p><strong>ಬಾಗಲಕೋಟೆ:</strong> ಅಂಬಿಗರ ಚೌಡಯ್ಯ ಒಬ್ಬ ನೇರ, ನಿಷ್ಠುರ, ಮಾರ್ಮಿಕ ವಚನಕಾರರಾಗಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.</p>.<p>ನವನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಚೌಡಯ್ಯನವರು ನದಿ ದಾಟಿಸುವ ಅಂಬಿಗರಾಗಿರದೇ ಭವಸಾಗರ ದಾಟಿಸುವ ಅಂಬಿಗರಾಗಿದ್ದರು. ಇವರ ವಚನಗಳಲ್ಲಿ ಕಠೋರತೆ ಇದ್ದರೂ ಮಾತೃ ಹೃದಯಿಯಾಗಿದ್ದರು ಎಂದರು.</p>.<p>ವಚನಗಳ ಮೂಲಕ ಸಮಾಜದಲ್ಲಿ ಮೂಢನಂಬಿಕೆ, ಅನಿಷ್ಟ ಪದ್ಧತಿಗಳನ್ನು ನೇರವಾಗಿ ಖಂಡಿಸಿದ್ದರು. ಕಾಯಕ ಜೀವಿ, ಶೋಷಿತ ಸಮಾಜದವರಾಗಿದ್ದರು ಎಂದು ಹೇಳಿದರು.</p>.<p>ಉಪನ್ಯಾಸ ನೀಡಿದ ಮಲ್ಲಿಕಾರ್ಜುನ ಕಮತಗಿ, ಚೌಡಯ್ಯನವರು ಬರೆದ 719 ವಚನಗಳು ದೊರೆತಿವೆ. ಅವುಗಳಲ್ಲಿ ನೇರ, ನಿಷ್ಠುತ ಕಲ್ಯಾಣ ಸಂದೇಶಗಳಿವೆ. ಅವರ ವಚನಗಳು ದಾರಿದೀಪವಾಗಿವೆ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ್ ವಾಸುದೇವಸ್ವಾಮಿ ಇದ್ದರು.</p>.<p>ಬಿಜೆಪಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರ:</p>.<p>ಅಂಬಿಗರ ಚೌಡಯ್ಯ, ಮಹಾಯೋಗಿ ವೇಮನರು ಶತಮಾನ ಕಂಡ ದಾರ್ಶನಿಕರು. ಇಬ್ಬರೂ ತಮ್ಮ ನೇರ, ನಿರ್ಭೀತ ವಚನಗಳಿಂದ ಜಾತಿ-ಭೇದಗಳನ್ನು ಖಂಡಿಸಿ, ಸಮಾನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಪ್ರತಿಪಾದಿಸಿದರು ಎಂದು ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್.ಪಾಟೀಲ ಹೇಳಿದರು.</p>.<p>ಅಂಬಿಗರ ಚೌಡಯ್ಯ ವಚನಗಳ ಮೂಲಕ ಭವಸಾಗರ ದಾಟುವ ಕೌಶಲ ಹೇಳಿದರೆ, ವೇಮನರು ತಮ್ಮ ಪದ್ಯಗಳಲ್ಲಿ ಜನಪದ ಮತ್ತು ತತ್ವಶಾಸ್ತ್ರ ಬೆರೆಸಿ ಸಾರ್ವತ್ರಿಕ ಮೌಲ್ಯಗಳನ್ನು ಸಾರಿದರು ಎಂದರು.</p>.<p>ಬಸವರಾಜ ಯಂಕಂಚಿ, ಶಿವಾನಂದ ಟವಳಿ ಮಾತನಾಡಿದರು. ಡಾ. ಎಂ.ಎಸ್. ದಡ್ಡೇನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಗುಂಡೂರಾವ್ ಶಿಂಧೆ, ಭಾಗೀರಥಿ ಪಾಟೀಲ, ರಾಮಣ್ಣ ರಾಮೋಡಗಿ, ಸಿ.ವಿ.ಕೋಟಿ, ಅಯ್ಯಪ್ಪ ವಾಲ್ಮೀಕಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಅಂಬಿಗರ ಚೌಡಯ್ಯ ಒಬ್ಬ ನೇರ, ನಿಷ್ಠುರ, ಮಾರ್ಮಿಕ ವಚನಕಾರರಾಗಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಹೇಳಿದರು.</p>.<p>ನವನಗರದ ಅಂಬೇಡ್ಕರ್ ಭವನದಲ್ಲಿ ಬುಧವಾರ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಚೌಡಯ್ಯನವರು ನದಿ ದಾಟಿಸುವ ಅಂಬಿಗರಾಗಿರದೇ ಭವಸಾಗರ ದಾಟಿಸುವ ಅಂಬಿಗರಾಗಿದ್ದರು. ಇವರ ವಚನಗಳಲ್ಲಿ ಕಠೋರತೆ ಇದ್ದರೂ ಮಾತೃ ಹೃದಯಿಯಾಗಿದ್ದರು ಎಂದರು.</p>.<p>ವಚನಗಳ ಮೂಲಕ ಸಮಾಜದಲ್ಲಿ ಮೂಢನಂಬಿಕೆ, ಅನಿಷ್ಟ ಪದ್ಧತಿಗಳನ್ನು ನೇರವಾಗಿ ಖಂಡಿಸಿದ್ದರು. ಕಾಯಕ ಜೀವಿ, ಶೋಷಿತ ಸಮಾಜದವರಾಗಿದ್ದರು ಎಂದು ಹೇಳಿದರು.</p>.<p>ಉಪನ್ಯಾಸ ನೀಡಿದ ಮಲ್ಲಿಕಾರ್ಜುನ ಕಮತಗಿ, ಚೌಡಯ್ಯನವರು ಬರೆದ 719 ವಚನಗಳು ದೊರೆತಿವೆ. ಅವುಗಳಲ್ಲಿ ನೇರ, ನಿಷ್ಠುತ ಕಲ್ಯಾಣ ಸಂದೇಶಗಳಿವೆ. ಅವರ ವಚನಗಳು ದಾರಿದೀಪವಾಗಿವೆ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ತಹಶೀಲ್ದಾರ್ ವಾಸುದೇವಸ್ವಾಮಿ ಇದ್ದರು.</p>.<p>ಬಿಜೆಪಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರ:</p>.<p>ಅಂಬಿಗರ ಚೌಡಯ್ಯ, ಮಹಾಯೋಗಿ ವೇಮನರು ಶತಮಾನ ಕಂಡ ದಾರ್ಶನಿಕರು. ಇಬ್ಬರೂ ತಮ್ಮ ನೇರ, ನಿರ್ಭೀತ ವಚನಗಳಿಂದ ಜಾತಿ-ಭೇದಗಳನ್ನು ಖಂಡಿಸಿ, ಸಮಾನತೆ, ಸ್ವಾತಂತ್ರ್ಯ ಮತ್ತು ಸಾಮಾಜಿಕ ನ್ಯಾಯ ಪ್ರತಿಪಾದಿಸಿದರು ಎಂದು ಬಿಟಿಡಿಎ ಮಾಜಿ ಅಧ್ಯಕ್ಷ ಜಿ.ಎನ್.ಪಾಟೀಲ ಹೇಳಿದರು.</p>.<p>ಅಂಬಿಗರ ಚೌಡಯ್ಯ ವಚನಗಳ ಮೂಲಕ ಭವಸಾಗರ ದಾಟುವ ಕೌಶಲ ಹೇಳಿದರೆ, ವೇಮನರು ತಮ್ಮ ಪದ್ಯಗಳಲ್ಲಿ ಜನಪದ ಮತ್ತು ತತ್ವಶಾಸ್ತ್ರ ಬೆರೆಸಿ ಸಾರ್ವತ್ರಿಕ ಮೌಲ್ಯಗಳನ್ನು ಸಾರಿದರು ಎಂದರು.</p>.<p>ಬಸವರಾಜ ಯಂಕಂಚಿ, ಶಿವಾನಂದ ಟವಳಿ ಮಾತನಾಡಿದರು. ಡಾ. ಎಂ.ಎಸ್. ದಡ್ಡೇನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್, ಗುಂಡೂರಾವ್ ಶಿಂಧೆ, ಭಾಗೀರಥಿ ಪಾಟೀಲ, ರಾಮಣ್ಣ ರಾಮೋಡಗಿ, ಸಿ.ವಿ.ಕೋಟಿ, ಅಯ್ಯಪ್ಪ ವಾಲ್ಮೀಕಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>