ಧಾರಾಕಾರ ಮಳೆಯಾಗುತ್ತಿರುವುದರಿಂದ ರೈತಾಪಿ ವರ್ಗ ಸಂತಸಗೊಂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಹೊಲ ಗದ್ದೆಗಳಲ್ಲಿ ನೀರು ನಿಂತಿದ್ದು ಕೃಷಿ ಹೊಂಡಗಳು ಮತ್ತು ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದೆ. ಸತತ ಮಳೆಯಿಂದಾಗಿ ಹಳ್ಳ ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚುತ್ತಿರುವುದು ರೈತರಿಗೆ ಖುಷಿ ನೀಡಿದೆ.